Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಪ್ರವಾದಿ ಮೊಹಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ಬಿಜೆಪಿ ಶಾಸಕನ ವಿರುಧ್ದ ಆಕ್ರೋಶ
ರಾಜ್ಯ

ಪ್ರವಾದಿ ಮೊಹಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ಬಿಜೆಪಿ ಶಾಸಕನ ವಿರುಧ್ದ ಆಕ್ರೋಶ

D KumaraswamyBy D KumaraswamyAugust 24, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

BIG BREAKING

ಪ್ರವಾದಿ ಮಹಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಮುಗಿಲು ಮುಟ್ಟಿದ ಆಕ್ರೋಶ

ಹೈದರಾಬಾದ್​​ನಲ್ಲಿ ಅಮಾನತುಗೊಂಡಿರುವ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್​​ ಅವರಿಗೆ ಜಾಮೀನು ಸಿಗುತ್ತಿದ್ದಂತೆ ಮುಸ್ಲಿಂ ಸಮುದಾಯದ ಆಕ್ರೋಶ ಮುಗಿಲುಮುಟ್ಟಿದೆ. ರಾಜಾ ಸಿಂಗ್​​ಗೆ ಜಾಮೀನು ಸಿಕ್ಕಿರುವುದನ್ನು ವಿರೋಧಿಸಿ ರಾತ್ರಿಯಿಡೀ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯ ಸಂದರ್ಭದಲ್ಲಿ ತಲೆಯನ್ನು ದೇಹದಿಂದ ಬೇರ್ಪಡಿಸಿ ಎಂಬ ಘೋಷಣೆಗಳು ಮೊಳಗುತ್ತಲೇ ಇದ್ದವು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಸಾಕಷ್ಟು ಯತ್ನಿಸಿದರು. ಈ ಸಂದರ್ಭದಲ್ಲಿ ಸಬ್​ ಇನ್​ಸ್ಪೆಕ್ಟರ್​ ಸೇರಿದಂತೆ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.

 

 

ಸಿಆರ್​​ಪಿಸಿ ಸೆಕ್ಷನ್​ 41(ಎ) ಅಡಿಯಲ್ಲಿ ಯಾವುದೇ ನೋಟಿಸ್​​​ನ್ನು ಶಾಸಕ ರಾಜಾ ಸಿಂಗ್​​ ಅವರಿಗೆ ನೀಡಲಾಗಿಲ್ಲ ಎಂದು ರಾಜಾ ಸಿಂಗ್​ ಪರ ವಕೀಲರು ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ಕೋರ್ಟ್​ ಎದುರು ವಾದಿಸಿದರು. ವಕೀಲರ ಈ ವಾದವನ್ನು ಪರಿಗಣನೆಗೆ ತೆಗೆದುಕೊಂಡ ನ್ಯಾಯಾಲಯ ಜಾಮೀನನ್ನು ನೀಡಿತ್ತು.

ಜಾಮೀನು ದೊರಕಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆಯೇ ತೆಲಂಗಾಣದಾದ್ಯಂತ ಪ್ರತಿಭಟನೆಗಳು ಮಿತಿಮೀರಿವೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಅಂಬರ್​ಪೇಟ್​​, ತಲಬಕಟ್ಟಾ, ಮೊಗಲ್​​ಪುರ, ಖಿಲ್ವತ್​, ಬಹದ್ದೂರ್​ಪುರ ಹಾಗೂ ಚಂಚಲಗುಡಾದಲ್ಲಿ ರಾಜಾ ಸಿಂಗ್​​​ ವಿರುದ್ಧ ಪ್ರತಿಭಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಪ್ರತಿಭಟನಾಕಾರರು ಕೋರ್ಟ್​ನ ಆದೇಶವನ್ನು ವಿರೋಧಿಸಿ ಬರ್ಕಾಸ್​ನಿಂದ ಚಂದ್ರಾಯನಗುಟ್ಟದವರೆಗೆ ಮೆರವಣಿಗೆ ನಡೆಸಿದ್ದಾರೆ.

ಹೈದರಾಬಾದ್​ನ ಶಾಲಿಬಂಡಾದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ ಏರ್ಪಟ್ಟಿದೆ. ಪ್ರತಿಭಟನಾಕಾರರು ಪೊಲೀಸ್​ ವ್ಯಾನ್​ನ್ನು ಧ್ವಂಸಗೊಳಿಸಿದ್ದಾರೆ. ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿದ್ದು ಮಾತ್ರವಲ್ಲದೇ ರಾಜಾ ಸಿಂಗ್​ ಪೋಸ್ಟರ್​​ಗೆ ಚಪ್ಪಲಿಯಿಂದ ಹೊಡೆದು ಅವರ ಪ್ರತಿಕೃತಿ ದಹಿಸಿದ್ದಾರೆ.

ನೂಪುರ್ ಶರ್ಮಾ ಬೆನ್ನಲ್ಲೇ ತೆಲಂಗಾಣದ ಅಮಾನತುಗೊಂಡಿರುವ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್​ ಪ್ರವಾದಿ ಮೊಹಮ್ಮದ್ ಪೈಗಂಬರ್​ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೆ ಈಡಾಗಿದ್ದಾರೆ. ಸಮುದಾಯದ ಭಾವನೆಗೆ ಧಕ್ಕೆಯುಂಟು ಮಾಡಿದ ಆರೋಪದ ಅಡಿಯಲ್ಲಿ ರಾಜಾ ಸಿಂಗ್​​ರನ್ನು ಬಂಧಿಸಲಾಗಿತ್ತು.

 

Share. Facebook Twitter Pinterest LinkedIn Tumblr WhatsApp Email
Previous Articleಅಕ್ರಮ‌ ಪರೀಕ್ಷೆ ಆರೋಪ : ಪ್ರಾಂಶುಪಾಲ ಹಾಗೂ ಡಿಡಿ ಪಿಯು ಅಮಾನತ್ತು ಮಾಡಿ
Next Article ಜಾತ್ರೆಗೆ ಬರುವ ಭಕ್ತರಿಗೆ ತೊಂದರೆ ಅಗದಂತೆ ವ್ಯವಸ್ಥೆ ಮಾಡಿ
D Kumaraswamy
  • Tumblr

Related Posts

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.