ಚಿತ್ರದುರ್ಗ)-ಕಾರು ಹಾಗೂ ದ್ವಿಚಕ್ರ ವಾಹನದ ಮಧ್ಯೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಸಿರಿಗೆರೆ ಬಳಿ ಅಪಘಾತ ನಡೆದಿದ್ದು ಅವರನ್ನು ಕೂಡಲೇ ಆಸ್ಪತ್ರೆ ದಾಖಲಿಸಿ ಪ್ರಾಣಾಪಾಯದಿಂದ ಪಾರು ಮಾಡಿ ಸಭಾಪತಿ ಬಸವರಾಜ ಹೊರಟ್ಟಿ ಮಾನವೀಯತೆ ಮೆರೆದಿದ್ದಾರೆ.
ಬೈಕ್ ಹಾಗೂ ಕಾರು ನಡುವೆ ನಡೆದ ಅಪಘಾತದಲ್ಲಿ ಮಗು ಹಾಗೂ ದಂಪತಿ ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಅಸ್ಪತ್ರೆಗೆ ಸಾಗಿಸಿ ಅವರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಂಡರು ಸ್ಥಳದಿಂದಲೇ ಭರಮಸಾಗರ ಪೋಲಿಸರಿಗೆ ಮಾಹಿತಿ ನೀಡಿ ಅವರು ಬರುವವರೆಗೂ ಇದ್ದು ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸುವ ವರೆಗೂ ತಾವೂ ಜೊತೆಯಲ್ಲಿಯೇ ಇದ್ದು ಮಾನವೀಯತೆ ಮೆರೆದಿದ್ದಾರೆ. ಇದಕ್ಕೂ ಮುನ್ನ ಹೊರಟ್ಟಿ,
ಬೆಂಗಳೂರಿನಲ್ಲಿ
ಕಚೇರಿ ಕೆಲಸ ಮುಗಿಸಿ ಹುಬ್ಬಳ್ಳಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಂಗಳೂರಿನಿಂದ ತೆರಳುತ್ತಿದ್ದರು. ಮಾರ್ಗಮಧ್ಯದಲ್ಲಿ ಸಿರೆಗೆರೆ ಬಳಿ ತಮ್ಮ ಕಣ್ಣೆದುರಿಗೆ ಸಂಭವಿಸಿದ ಅಪಘಾತ ಗಮನಿಸಿ ಕೂಡಲೇ ತಮ್ಮ ವಾಹನ ನಿಲ್ಲಿಸಿ ಗಾಯಾಳುಗಳಿಗೆ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಲು ಸಹಕರಿಸಿದರು.
ಸಂಯುಕ್ತವಾಣಿ
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
8660924503