ಇಂದಿನಿಂದ ಕೋಟೆ ನಾಡಿನಲ್ಲಿ ರಾತ್ರಿ ಕರ್ಫ್ಯೂ ಎಚ್ಚರ!!

ಜಿಲ್ಲಾ ಸುದ್ದಿ

ಚಿತ್ರದುರ್ಗ,(ಸಂವಾ)-ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ಹರಡುವಿಕೆ ಹೆಚ್ಚಾಗುತ್ತಿದ್ದಂತೆ ಸರ್ಕಾರವೂ ಇಂದು ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂವನ್ನು ಜಾರಿಗೊಳಿಸಿ‌ ಆದೇಶಿಸಿದ್ದು ಚಿತ್ರದುರ್ಗ ಜಿಲ್ಲೆಯಲ್ಲಿಯೂ ಕೂಡ ರಾತ್ರಿ ಕರ್ಪ್ಯೂವನ್ನು ಜಾರಿಗೊಳಿಸಿ ಡಿಸಿ‌ ಆದೇಶ ಹೊರಡಿಸಿದೆ.

 

 

 

ಓಮಿಕ್ರಾನ್ ವೈರಸ್ ಹರಡದಂತೆ ತಡೆಗಟ್ಟಲು ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕೋಟೆ ‌ನಾಡು ಚಿತ್ರದುರ್ಗದಲ್ಲಿಯೂ ಕೂಡ ರಾತ್ರಿ ಕರ್ಪ್ಯೂವನ್ನು ಜಾರಿಗೊಳಿಸಲಾಗಿದೆ. ರಾತ್ರಿ ಹತ್ತರಿಂದ ಬೆಳಗಿನ ಜಾವ ಐದರವರೆಗೂ 144 ಸೆಕ್ಷನ್ ಜಾರಿಗೊಳಿಸಿದ್ದು, ಯಾರು ಕೂಡ ಅನಾವಶ್ಯಕವಾಗಿ ಓಡಾಡುವಂತಿಲ್ಲ. ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರ ಓಡಾಡಲು, ಪ್ರಯಾಣಿಸಲು ಮಾತ್ರ ಅವಕಾಶ ನೀಡಲಾಗಿದೆ. ಒಂದು ವೇಳೆ ಯಾರಾದ್ರೂ ಅನಾವಶ್ಯಕವಾಗಿ ಓಡಾಡುವುದು ಕಂಡು ಬಂದರೆ ನಿಯಮ ಉಲ್ಲಂಘಿಸಿದರೆ ಅಂತವರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನೀಕೇರಿ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *