ಚಿತ್ರದುರ್ಗ: ಜನಪರ ಹೋರಾಟಗಾರ ಎಂ.ಜಯ್ಯಣ್ಣ ನಿಧನರಾಗಿರುವುದು ನಾಡಿಗೆ ತುಂಬಲಾರದ
ನಷ್ಟ ಎಂದು ಭೋವಿಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ಸಂತಾಪ ಸೂಚಿಸಿದ್ದಾರೆ.
ನಾಡಿನ ಅನೇಕ ಜೀವಂತ ಸಮಸ್ಯೆಗಳಿಗೆ ಹೋರಾಟದ ಮೂಲಕ ನ್ಯಾಯ ಒದಗಿಸುವ ಕಾರ್ಯವನ್ನು ಮಾಡಿದವರು. ನೆಲ-ಜಲ ಮತ್ತು ಸಾಮಾಜಿಕ ಸಮಸ್ಯೆಗಳು ಉಂಟಾದಾಗ ಹೋರಾಟದ ಮೂಲಕ ಪರಿಹಾರವನ್ನು ಒದಗಿಸುವ ಕಾರ್ಯ ಮಾಡುತ್ತಿದ್ದರು. ಅನೇಕ ಹೋರಾಟಗಳಿಗೆ ಮುಂಚೂಣಿ ನಾಯಕರಾಗಿ ರಾಜ್ಯದ ಉದ್ದಗಲಕ್ಕೂ ಸಂಚರಿಸಿದ್ದರು.
ಚಿತ್ರದುರ್ಗ ಜಿಲ್ಲೆಯ ನೀರಾವರಿ ಹೋರಾಟ ಹಾಗೂ ರೈಲ್ವೆ ಹೋರಾಟದಲ್ಲಿ ಸಕ್ರಿಯರಾಗಿದ್ದರು. ಸಮಕಾಲೀನ ಚಿಂತನೆಗಳ ಮೇಲೆ ಬೆಳಕು ಚೆಲ್ಲುವಂತಹ ಹೋರಾಟಗಳನ್ನು ರೂಪಿಸಿದವರಾಗಿದ್ದರು. ಧ್ವನಿಯಿಲ್ಲದವರಿಗೆ ಧ್ವನಿಯಾಗಿ ನಿಲ್ಲುತ್ತಿದ್ದರು. ಇಂತಹವರ ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಕುಟುಂಬ ವರ್ಗಕ್ಕೆ ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಬಸವಾದಿ ಪ್ರಮಥರು ನೀಡಲಿ ಎಂದು ಶ್ರೀಗಳು ಸಂತಾಪ ಸೂಚಿಸಿದ್ದಾರೆ.
ಸಂಯುಕ್ತವಾಣಿ
ಡಿ.ಕುಮಾರಸ್ವಾಮಿ