ಚಿತ್ರದುರ್ಗ,(ಸಂವಾ)-ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಮೂಲಕ ರಾಜ್ಯ ಸರ್ಕಾರ ತನಿಖೆ ನಡೆಸುತ್ತಿದೆ.ಸತ್ಯ ಮುಚ್ಚಿಡುವಂತಿದ್ದಲ್ಲ ತನಿಖೆ ಬಳಿಕ ಎಲ್ಲವೂ ಹೊರ ಬರಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.
ಅವರು ಮುರುಘಾ ಮಠದಲ್ಲಿ ನಡೆದ ಶರಣ ಸೇನೆ ಉದ್ಘಾಟನೆಗೆ ಆಗಮಿಸಿದ್ದ ವೇಳೆ ಮಾತನಾಡುತ್ತಾ, ರಮೇಶ್ ಜಾರಕಿಹೊಳಿ ನಿನ್ನೆ ದೂರು ನೀಡಿದ್ದಾರೆ. ಬರುವ ದಿನಗಳಲ್ಲಿ ತನಿಖೆ ಬಳಿಕ ಯಾವುದೂ ಮುಚ್ಚಿಡುವಂತದ್ದಿಲ್ಲ. ಎಲ್ಲವೂ ಬಯಲಾಗಲಿದೆ. ಯಾವ ಸಂದರ್ಭದಲ್ಲಿ ವಿಡಿಯೋ ಬಿಟ್ಟಿದ್ದಾರೆ ಎಂದು ತನಿಖೆ ನಂತರ ಸತ್ಯ ಹೊರ ಬೀಳಲಿದೆ ಎಂದು ವಿಜಯೇಂದ್ರ ಹೇಳಿದರು.
ಸಂಯುಕ್ತ ವಾಣಿ