ಬಸ್ ನಲ್ಲಿ ಸಾಗಿಸುತ್ತಿದ್ದ 1.15 ಲಕ್ಷ ರೂಪಾಯಿಯನ್ನು ಪೊಲೀಸರು ಪರಿಶೀಲಿಸಿ ವಶಕ್ಕೆ ಪಡೆದಿದ್ದಾರೆ.ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚಳ್ಳಕೆರೆಯ ಕೆಇಬಿ ಚಕ್ ಪೋಸ್ಟ್ ಬಳಿ ವ್ಯಕ್ತಿಯೊಬ್ಬ 1.15 ಲಕ್ಷ ಹಣವನ್ನು ಸಾಗಿಸುತ್ತಿದ್ದು, ಪೊಲೀಸರು ಪರಿಶೀಲಿಸಿದಾಗ ಹಣ ಸಾಗಿಸುತ್ತಿದ್ದ ವ್ಯಕ್ತಿ ಅಕ್ಕಿ ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದ ಗೋಪಿನಾಥ್ ಎಂದು ತಿಳಿದು ಬಂದಿದೆ. ಈತ ಚಳ್ಳಕೆರೆಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದಾಗ ಬಸ್ ನಿಲ್ಲಿಸಿ ತಪಾಸಣೆ ನಡೆಸಿದಾಗ ಹಣ ಸಿಕ್ಕಿದ್ದು ಚಳ್ಳಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಾಯಕನಹಟ್ಟಿ ಕ್ರಾಸ್ ಬಳಿ ಇರುವ ಚಕ್ ಪೋಸ್ಟ್ ನ ಪೊಲೀಸರು ಪರಿಶೀಲಿಸಿ 38 ಲಕ್ಷ ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಹಣವು ಚಳ್ಳಕೆರೆಯ ಬ್ಯಾಂಕ್ ಆಫ್ ಬರೋಡಾದ್ದಾಗಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ಯೋಜನೆಗಾಗಿ ಗ್ರಾಮಸ್ಥರು ಬ್ಯಾಂಕಿನಿಂದ ಬಿಡಿಸಿಕೊಂಡು ಬರುವಾಗ ಚಕ್ ಪೋಸ್ಟ್ ಸಿಬ್ಬಂದಿಗಳು ವಶಕ್ಕೆ ಪಡೆದಿದ್ದು, ತಹಶೀಲ್ದಾರ್ ಮತ್ತು ಆಧಾಯ ತೆರಿಗೆ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.