ಚಿತ್ರದುರ್ಗ:ಬೆಳ್ಳಂಬೆಳಗ್ಗೆ ಚಿರತೆಯೊಂದು ಕೋಟೆ ನಾಡು ಚಿತ್ರದುರ್ಗ ಮನೆಗೆ ನುಗ್ಗಿ ಆತಂಕ ಉಂಟು ಮಾಡಿರುವ ಘಟನೆ ನಡೆದಿದೆ.
ಚಿತ್ರದುರ್ಗ ತಾಲೂಕಿನ ಮುದ್ದಾಪುರ ಗ್ರಾಮದ ಚಿದಾನಂದ ಎಂಬುವರ ಮನೆಗೆ ಬೆಳಗಿನ ಜಾವ 5.30 ರ ಸಮಯದಲ್ಲಿ ಮನೆಗೆ ನುಗ್ಗಿ ಅವಿತು ಕುಳಿತಿದೆ. ಚಿರತೆಯನ್ನು ಕಂಡು ಮನೆಯಿಂದ ಹೊರಗೆ ಓಡೋಡಿ ಬಂದ ಮನೆಯವರು ವಿಷಯ ಗ್ರಾಮಕ್ಕೆ ಹರಡುತ್ತಿದ್ದಂತೆ ನೋಡಲು ಜನರು ಮುಗಿ ಬಿದ್ದಿದ್ದಾರೆ. ಜೊತೆಗೆ ಆತಂಕ ಮನೆ ಮಾಡಿದೆ. ಅರಣ್ಯ ಸಿಬ್ಬಂದಿಗೆ ವಿಷಯ ಮುಟ್ಟಿಸುತ್ತಿದ್ದಂತೆ ಕಾರ್ಯಚರಣೆಗೆ ಒಳಗಾದ ಸಿಬ್ಬಂದಿ ಚಿರತೆ ಹಿಡಿಯಲು ಮುಂದಾಗಿದ್ದರು. ಕೊನೆಗೆ ಗ್ರಾಮಸ್ಥರ ಸಹಾಯದಿಂದ ಚಿರತೆಯ ನ್ನು ಹಿಡಿದು ತೆಗೆದುಕೊಂಡು ಹೋಗಿದ್ದರಿಂ ಗ್ರಾಮಸ್ಥರಲ್ಲಿ ಮನೆ ಮಾಡಿದ್ದ ಅತಂಕ ದೂರವಾಗಿದೆ.
ಸಂಯುಕ್ತವಾಣಿ