ಅಜಾದಿ ಕಿ ಅಮೃತ ಮಹೋತ್ಸವದಲ್ಲಿ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ತಿರಂಗವನ್ನು ಹಾರಿಸಬೇಕು ಎಂದು ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಹೇಳಿದರು.
ಅವರು ಇಂದು ಬಿಜೆಪಿ ವತಿಯಿಂದ ಆಯೋಜಿಸಿದ್ದ ಐದು ಸಾವಿರ ಬೈಕ್ ಗಳ ಜಾಥದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಸ್ವಾತಂತ್ರ್ಯ ಬಂದು 75 ವರ್ಷಗಳು ಪೂರೈಸಿದ್ದು, ಈ ಬಾರಿ ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದೇವೆ.ಇಂದಿನಿಂದ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಗ್ರಾಮಾಂತರ ಪ್ರದೇಶಗಳಲ್ಲೂ ಕೂಡ ಮನೆ ಮನೆ ಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶ ಪ್ರೇಮವನ್ನು ಮೆರೆಯಿರಿ, ಹಾಗೂ ಹರ್ ಘರ್ ತಿರಂಗದ ಉದ್ದೇಶವನ್ನು ತಿಳಿಸಿ ಎಂದರು.ಇದೇ ಸಮಯದಲ್ಲಿ
ಐದು ಸಾವಿರ ಬೈಕ್ ಗಳಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಎಂಎಲ್ಸಿ ನವೀನ್, ಬಿಜೆಪಿ ಪಕ್ಷದ ವಿವಿಧ ಸೆಲ್ ಗಳ ಅಧ್ಯಕ್ಷರು , ಕಾರ್ಯಕರ್ತರು, ಮತ್ತು ಸಾರ್ವಜನಿಕರು ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದ್ದರು





