ಲಾರಿಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬ್ರಿಡ್ಜ್ ಮೇಲಿಂದ ಟ್ಯಾಂಕರ್ ಉರುಳಿ ಸ್ಥಳದಲ್ಲಿ ಲಾರಿ ಟ್ಯಾಂಕರ್ ಚಾಲಕ ಮೃತ ಪಟ್ಟ ಘಟನೆ ನಡೆದಿದೆ.
ಚಿತ್ರದುರ್ಗ ತಾಲೂಕಿನ ಗುಡ್ಡದ ರಂಗವ್ವನಹಳ್ಳಿ ಬಳಿ ಟ್ಯಾಂಕರ್ ಗೆ ಬಸ್ ಡಿಕ್ಕಿ ಹೊಡೆದಿದ್ದು, ಟ್ಯಾಂಕರ್ ಉರುಳಿ ಬಿದ್ದಿದೆ. ಮೃತ ಚಾಲಕನನ್ನು ಚಿತ್ರದುರ್ಗದ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಈತ ವೆಂಕಟೇಶ್ವರ ಟಾಕೀಸ್ ಬಳಿಯ ನಿವಾಸಿಯಾಗಿದ್ದಾನೆ. ಬಸ್ಸಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಠಾಣೆ ಸಿಪಿಐ ಬಾಲ ಚಂದ್ರ ನಾಯ್ಕ್ ಭೇಟಿ ನೀಡಿ ಪರಿಶೀಲಿಸಿದ್ದಾರೆ