ಕೋಟೆ ನಾಡಿನಲ್ಲಿ ಕುತೂಹಲ ಮೂಡಿಸಿದ ಪಕ್ಷೇತರ ಅಭ್ಯರ್ಥಿ ಬಿಜೆಪಿಗೆ ಸೇರ್ಪಡೆ ?

ರಾಜಕೀಯ

ಚಿತ್ರದುರ್ಗವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸೌಭಾಗ್ಯ ಬಸವರಾಜ್ ಅವರು ಚುನಾವಣಾ ಕಣದಿಂದ ಹಿಂದೆ ಸರಿದು ಬಿಜೆಪಿ ಸೇರ್ಪಡೆ ಯಾಗುತ್ತಾರೆ ಎನ್ನುವ ವಿಷಯ ಬಾರಿ ಕುತೂಹಲ ಮೂಡಿಸಿದೆ.
ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ಜನತೆ ನೀವು ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಅದರಲ್ಲೂ ಸೌಭಾಗ್ಯ ನಿಂತರೆ ಗೆಲ್ಲುತ್ತಾರೆ ಎಂದು ಹೇಳುತ್ತಿದ್ದು, ಅದಕ್ಕಾಗಿ ನಿಲ್ಲುತ್ತಿದ್ದೇನೆ ಎಂದು ಹೇಳಿಕೆ ನೀಡಿ ಚುನಾವಣೆಯ ಕಣದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಇಳಿದಿದ್ದರು. ಆದರೆ ಒಂದು ವಾರಗಳ ಕಾಲ ಕ್ಷೇತ್ರದ ತುಂಬೆಲ್ಲಾ ಓಡಾಡಿ ಪ್ರಚಾರ ‌ಮಾಡಿ ಇದೀಗ ಯಡಿಯೂರಪ್ಪ ಸಮ್ಮುಖದಲ್ಲಿ  ಬಿಜೆಪಿ ಸೇರ್ಪಡೆ ಯಾಗುತ್ತಿರುವುದು ಅವರ ಅಭಿಮಾನಿಗಳಿಗೆ ಹಾಗೂ ಕಾರ್ಯಕರ್ತರಿಗೆ ನುಂಗಲಾರದ ತುತ್ತಾಗಿದೆ. ಒಟ್ಟಾರೆ. ಸೌಭಾಗ್ಯ ಬಸವರಾಜ‌್ ಬಿಜೆಪಿ ಸೇರ್ಪಡೆಯಾದರೆ ಬಿಜೆಪಿಗೆ ಹಾಗೂ ಶಾಸಕ ತಿಪ್ಪಾರೆಡ್ಡಿ ಅವರಿಗೆಯಾವ ರೀತಿ ಲಾಭಾಗುತ್ತದೆ ಎಂಬ ಲೆಕ್ಕಾಚಾರ ಶುರು ಅಗಿದೆ.

 

 

 

Leave a Reply

Your email address will not be published. Required fields are marked *