Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ : ಮಾರ್ಚ್ 25 ಕಡೆಯ ದಿನ
ರಾಜ್ಯ

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ : ಮಾರ್ಚ್ 25 ಕಡೆಯ ದಿನ

D KumaraswamyBy D KumaraswamyMarch 24, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ : ಮಾರ್ಚ್ 25 ಕಡೆಯ ದಿನ

1661 ಮತಗಟ್ಟೆಗಳಿಗೆ ಚುನಾವಣೆ ಆಯೋಗದ ಅನುಮೋದನೆ

ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಮಾರ್ಚ್ 25 ಕಡೆಯ ದಿನವಾಗಿದೆ. ಚುನಾವಣೆ ಆಯೋಗಕ್ಕೆ ಕಳುಹಿಸಿದ ಜಿಲ್ಲೆಯ 1661 ಮತಗಟ್ಟೆಗಳ ಪಟ್ಟಿಗೆ ಅನುಮೋದನೆ ದೊರೆತಿದೆ ಎಂದು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಜರುಗಿದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

 

 

ನಮೂನೆ 6ರಲ್ಲಿ ಮತಪಟ್ಟಿಗೆ ಹೆಸರು ಸೇರಿಸಲು ಅರ್ಜಿ ಸಲ್ಲಿಸಬಹದು. ಆನ್ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳನ್ನು ಸಹ ಪರಿಗಣಿಸಲಾಗುವುದು. ನಮೂನೆ 8 ಸಲ್ಲಿಸುವ ತಿದ್ದುಪಡಿ ಅವಧಿ ಮುಕ್ತಾಯವಾಗಿದೆ. ಈಗಾಗಲೇ ಮತಪಟ್ಟಿ ಪರಿಷ್ಕರಣೆ ಕಾರ್ಯ ಪೂರ್ಣಗೊಂಡಿದ್ದು. ಮೃತಪಟ್ಟ ಹಾಗೂ ಸ್ಥಳಾಂತರಗೊಂಡ ಹೆಸರುಗಳನ್ನು ಮತ ಪಟ್ಟಿಯಿಂದ ತೆಗೆದುಹಾಕಲಾಗಿದೆ.

ಜಿಲ್ಲೆಯಲ್ಲಿ 85 ವರ್ಷ ಮೇಲ್ಪಟ್ಟ 17,723 ಮತದಾರರಿದ್ದಾರೆ. ಚುನಾವಣೆ ಆಯೋಗ ಇವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ಬಿ.ಎಲ್.ಒ(ಮತಗಟ್ಟೆ ಅಧಿಕಾರಿ)ಗಳು ಮನೆ ಮನೆಗೆ ತೆರಳಿ 85 ವರ್ಷ ಮೇಲ್ಪಟ್ಟವರಿಗೆ ಫಾರಂ12 ಡಿ, ನೀಡಿ ಸ್ವೀಕೃತಿ ಪಡೆಯುತ್ತಿದ್ದಾರೆ. ಮತಗಟ್ಟೆಗೆ ಆಗಮಿಸಲು ಸಾಧ್ಯವಿಲ್ಲದ ಹಾಸಿಗೆ ಹಿಡಿದ ವೃದ್ಧರು ಮನೆಯಿಂದಲೇ ಮತ ಚಲಾಯಿಸಲು ಆಯ್ಕೆ ಮಾಡಿಕೊಳ್ಳಬಹುದು.ಇದೇ ಮಾದರಿಯಲ್ಲಿ ಶೇ‌.40 ಕ್ಕಿಂತಲೂ ಹೆಚ್ಚಿನ ಅಂಗವೈಕಲ್ಯ ಇರುವ ವಿಕಲಚೇತನರಿಗೂ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.ಜಿಲ್ಲೆಯಲ್ಲಿ 31926 ವಿಕಲಚೇತನ ಮತದಾದರು ಇದ್ದು, ಇವರಿಗೆ ಫಾರಂ 12 ಡಿ ವಿತರಿಸುವ ಕಾರ್ಯ ಪ್ರಗತಿಯಲ್ಲಿದೆ.

ಮನೆಯಿಂದ ಮತ ಚಲಾಯಿಸಲು ಆಯ್ಕೆ ಮಾಡಿಕೊಂಡವರ ವಿವರಗಳನ್ನು ಆಯಾ ಕ್ಷೇತ್ರವಾರು ಸಹಾಯಕ ಚುನಾವಣಾ ಅಧಿಕಾರಿಗಳು ಪ್ರತ್ಯೇಕ ಪಟ್ಟಿಸಿದ್ದಪಡಿಸುವರು. ಮತದಾರರ ಭೌಗೋಳಿಕ ಸಾಮ್ಯತೆ ಆಧರಿಸಿ ಮತದಾನಕ್ಕೆ ಅನುಕೂಲವಾಗುವಂತೆ ಮಾರ್ಗಗಳನ್ನು ರಚಿಸಲಾಗುವುದು. ಮತಗಟ್ಟೆ ಅಧಿಕಾರಿಗಳು ಮನೆ ಬಾಗಿಲಿಗೆ ತೆರಳಿ ಅಂಚೆ ಮತ ಪತ್ರದ ಮೂಲಕ ಮತದಾನ ಮಾಡಲು ಅವಕಾಶ ನೀಡುವರು. ಮನೆಯಿಂದ ಮತದಾನ ಮಾಡುವ ಮೊದಲ ದಿನದಂದು ಯಾರಾದರು ಮತದಾನದಿಂದ ಪ್ರಕ್ರಿಯೆಯಿಂದ ತಪ್ಪಿಹೊದರೇ, ಎರೆಡನೇ ಬಾರಿ ಮನೆ ಬಾಗಿಲಿಗೆ ತೆರಳಿ ಮತದಾನಕ್ಕೆ ಅವಕಾಶ ನೀಡಲಾಗುವುದು. ಈ ಎಲ್ಲಾ ವಿವರಗಳನ್ನು ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರುಗಳಿಗೆ ಆಯಾ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ನೀಡುವರು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಜಿಲ್ಲೆಯಲ್ಲಿ 3861 ಅಗತ್ಯ ಸೇವಾ ಮತದಾರರು ಇದ್ದು, ಇವರಿಗೂ ಫಾರಂ 12 ಡಿ ನೀಡಲಾಗಿದೆ. ಇವರಿಗೆ ಮತದಾನದ ಪೂರ್ವದಲ್ಲಿ 3 ದಿನಗಳ ಕಾಲ ಪೆಸಿಲಿಟಿ ಸೆಂಟರ್ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಈಗಾಗಲೇ 30 ಸಾವಿರಕ್ಕೂ ಅಧಿಕ ಮತದಾದರ ಗುರುತಿನ ಚೀಟಿಗಳನ್ನು ಅಂಚೆ ಮೂಲಕ ರವಾನೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಈ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರತಿನಿಧಿಗಳಾದ ಡಿ.ಎನ್.ಮೈಲಾರಪ್ಪ, ಸಿ.ಜಿ.ನಾಸಿರುದ್ದೀನ್, ಬಿಜೆಪಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ಯಶವಂತ್ ಕುಮಾರ್, ಜೆಡಿಎಸ್ ಪಕ್ಷದ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ, ಡಿ.ಗೋಪಾಲಸ್ವಾಮಿ ನಾಯಕ್, ಬಿ.ಎಸ್.ಪಿ ಪಕ್ಷದ ಲಕ್ಷ್ಮಮ್ಮ, ಸಿಪಿಎಂ ಪಕ್ಷದ ಸುರೇಶ್ ಬಾಬು ಸೇರಿದಂತೆ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಜವನಗೊಂಡನಹಳ್ಳಿ ಚಕ್ ಪೋಸ್ಟ್ ನಲ್ಲಿ 1.44 ಕೋಟಿ ಹಣ ಜಪ್ತಿ
Next Article ಜೋಗಿ‌ಮಟ್ಟಿ ರಸ್ತೆಯ ಯಶೋಧಮ್ಮ ನಿಧನ
D Kumaraswamy
  • Tumblr

Related Posts

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026

ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

January 6, 2026

ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

December 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.