ನೇಣಿಗೆ ಶರಣಾದ ಮನನೊಂದ ಯುವಕ

ಜಿಲ್ಲಾ ಸುದ್ದಿ

ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಚಳ್ಳಕೆರೆಯಲ್ಲಿ ನಡೆದಿದೆ.
ಚಳ್ಳಕೆರೆ ನಗರದ ಸೂಜಿಮಲ್ಲೇಶ್ವರ ನಗರದ ರವಿಕುಮಾರ್(30) ಪೈಲ್ಸ್ ಕಾಯಿಲೆಯಿಂದ ಬಳಲುತ್ತಿದ್ದು, ಅನೇಕ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಚಿಕಿತ್ಸೆ ಫಲಿಸದ ಕಾರಣ ಮನನೊಂದು ಪಾವಗಡ ರಸ್ತೆಯ ಸಾಯಿಬಾಬ ಮಂದಿರದ ಸಮೀಪದ ಜಮೀನೊಂದರಲ್ಲಿ ಮರಕ್ಕೆ ನೇಣಿಗೆ ಶರಣಾಗಿದ್ದಾನೆ.
ಸ್ಥಳಕ್ಕೆ ಪಿಎಸ್ಐ ಧೆರೆಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ  ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

 

 

 

Leave a Reply

Your email address will not be published. Required fields are marked *