Author: D Kumaraswamy

ರಾಜೀನಾಮೆ ಕೊಡಲು ಬಂದ ಉಪಾಧ್ಯಕ್ಷರಿಂದ ನಗರಸಭೆ ಮಾಜಿ ಸದಸ್ಯನಿಂದ ಸರ್ಕಾರಿ ಆಸ್ತಿ ಕಬಳಿಕೆ ವಿರುದ್ಧ. ದಿಢೀರ್ ಪ್ರತಿಭಟನೆ ಚಿತ್ರದುರ್ಗ ,08: ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ ಇಂದು ರಾಜೀನಾಮೆ ಸಲ್ಲಿಸಲು ಆಗಮಿಸುತ್ತಿದ್ದಾಗ, ನಾಟಕೀಯ ಬೆಳವಣಿಗೆಯೊಂದು‌ ಇಂದು ನಡೆಯಿತು. ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ ಮತ್ತು ಪತಿ ಚಕ್ರವರ್ತಿ ಜೊತೆಯಾಗಿ ರಾಜೀನಾಮೆ ಸಲ್ಲಿಸಲು‌ ನಗರಸಭೆ ಕಮೀಷನರ್ ರೇಣುಕಾ ರನ್ನು‌ ನೋಡಲು ಬರುತ್ತಿದ್ದರು. ಇದರ ಮಧ್ಯೆ ನಗರಸಭೆ ಬಾಗಿಲ‌ ಬಳಿ  ಮಾಜಿ ಸದಸ್ಯ ಗಾಡಿ‌ ಮಂಜುನಾಥ್ ಮತ್ತು ಚಕ್ರವರ್ತಿ ನಡುವೆ ಮಾತಿನ ಚಕಮಕಿ‌ ನಡೆಯಿತು. ಚಕಮಕಿಗೆ ಚುನಾವಣೆಯ ಸಮಯದಲ್ಲಿ ಇಬ್ಬರ ನಡುವಿನ ವೈಷಮ್ಯವೇ ಕಾರಣ ಎಂದು‌ ತಿಳಿದು‌ ಬಂದಿದೆ. ಇಬ್ಬರ ನಡುವಿನ ಮಾತಿನ‌ ಚಕಮಕಿಯಿಂದ ಸಿಟ್ಟಾದ ಚಕ್ರವರ್ತಿ, ಪತ್ನಿ ಶ್ರೀದೇವಿ ಅವರ ಚುನಾವಣೆ ಸಮಯದಲ್ಲಿ, ನನ್ನ ಮೇಲೆ ಸುಳ್ಳು ಆರೋಪ ಮಾಡಿ, ಮೇಲಾಧಿಕಾರಿಗಳಿಗೆ ದೂರು‌ ನೀಡಿ, ಅಮಾನತ್ತುಗೊಳಿಸಲು ಕಾರಣರಾಗಿದ್ದರು. ಸುಖಾ ಸುಮ್ಮನೆ ಕಾಲು ಕೆರೆದು ‌ಜಗಳ ಮಾಡುತ್ತಾರೆ. ಇಷ್ಟೆ ಅಲ್ಲದೆ ಸ್ವಾಮಿ‌ವಿವೇಕಾನಂದ ನಗರದಲ್ಲಿ ನಗರಸಭೆಯ…

Read More

ಹೊಳಲ್ಕೆರೆ ,ಜು. 07;  ಐದನೆ ಬಾರಿಗೆ ನನ್ನನ್ನು ಗೆಲ್ಲಿಸಿರುವ ಮತದಾರರ ಋಣ ತೀರಿಸುವ ಜವಾಬ್ದಾರಿ ನನ್ನ ಮೇಲಿರುವುದರಿಂದ ಪ್ರತಿನಿತ್ಯ ಕೋಟ್ಯಾಂತರ ರೂ.ಗಳ ಅಭಿವೃದ್ದಿ ಕಾಮಗಾರಿಗಳನ್ನು ಮಾಡಿಸುತ್ತಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು. ಸಿರಿಗೆರೆ ಹೋಬಳಿ ಬ್ಯಾಲಹಾಳ್ ಗ್ರಾಮದಲ್ಲಿ ಒಂದು ಕೋಟಿ ರೂ.ವೆಚ್ಚದಲ್ಲಿ ನೂತನ ಸಿ.ಸಿ.ರಸ್ತೆ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.ನೀರು ಕರೆಂಟ್ ಸಿಕ್ಕರೆ ರೈತರು ಬದುಕಿಕೊಳ್ಳುತ್ತಾರೆನ್ನುವುದನ್ನು ಗಮನದಲ್ಲಿಟ್ಟುಕೊಂಡು ತಾಲ್ಲೂಕಿನಾದ್ಯಂತ ಹದಿನೇಳು ಕಡೆ ವಿದ್ಯುತ್ ಪವರ್ ಸ್ಟೇಷನ್ ನಿರ್ಮಿಸಿದ್ದೇನೆ. ಚಿಕ್ಕಜಾಜೂರಿನ ಕೋಟೆಹಾಳ್ ಸಮೀಪ ಐದುನೂರು ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸುತ್ತಿದ್ದೇನೆ. ಜೋಗ್‍ಫಾಲ್ಸ್‍ನಿಂದ ನೇರವಾಗಿ ಇಲ್ಲಿಗೆ ವಿದ್ಯುತ್ ಪೂರೈಕೆಯಾಗಲಿದ್ದು, ಇನ್ನು ಐವತ್ತು ವರ್ಷಗಳ ಕಾಲ ದಿನಕ್ಕೆ ಹತ್ತು ಗಂಟೆಗಳ ಕಾಲ ವಿದ್ಯುತ್ ಪೂರೈಕೆಯಾಗಲಿದೆ ಎಂದರು. ಒಂದು ಬಾರಿ ಗೆದ್ದವರು ಎರಡನೆ ಬಾರಿಗೆ ಭರಮಸಾಗರದಿಂದ ಗೆಲ್ಲುವುದಿಲ್ಲ ಎನ್ನುವ ನಂಬಿಕೆಯಿತ್ತು. ಮೊದಲ ಬಾರಿ ಸ್ಪರ್ಧಿಸಿದ್ದಾಗ ಓಡಾಡಲು ರಸ್ತೆಗಳಿರಲಿಲ್ಲ. ಎಲ್ಲಾ ಹಳ್ಳಿಗಳಲ್ಲೂ ರಸ್ತೆ ಮಾಡಿಸಿದ್ದರಿಂದ ರಸ್ತೆ ರಾಜ ಎನ್ನುವ ಬಿರುದು ನೀಡಿ ಯುವಕರು ಹೆಗಲ…

Read More

ಒಳಮೀಸಲಾತಿ ವರದಿ ಸರ್ಕಾರಕ್ಕೆ ಶೀಘ್ರ ಸಲ್ಲಿಸಿ:ಮಾಜಿ ಸಚಿವ ಆಂಜನೇಯ ನೇತೃತ್ವದ ನಿಯೋಗ ಮನವಿ ಬೆಂಗಳೂರು, ಜು.6:ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ನಡೆಸಿರುವ ಜಾತಿಗಣತಿ ಸಮೀಕ್ಷೆ ವರದಿಯನ್ನು ಶೀಘ್ರ ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ಮಾದಿಗ ಮುಖಂಡರು ಮನವಿ‌ ಮಾಡಿದರು. ಬೆಂಗಳೂರಿನಲ್ಲಿ ನ್ಯಾ.ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದ ಕಚೇರಿಗೆ ಮಾಜಿ ಸಚಿವ ಎಚ್.ಆಂಜನೇಯ ನೇತೃತ್ವದಲ್ಲಿ ಮಾದಿಗ ಮುಖಂಡರ ನಿಯೋಗ ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿತು.ರಾಜ್ಯದಲ್ಲಿ ಮಾದಿಗ ಮತ್ತು ಛಲವಾದಿ ಸಮುದಾಯ ಎಕೆ, ಎಡಿ, ಆದಿಆಂಧ್ರ ಹೆಸರಿನಲ್ಲಿ ಗುರುತಿಸಿಕೊಂಡು ಗೊಂದಲದ ಕಾರಣ ಒಳಮೀಸಲಾತಿ ಜಾರಿಗೆ ತಾಂತ್ರಿಕ ಅಡಚಣೆ ಆಗಿತ್ತು.ಈ ನಿಟ್ಟಿನಲ್ಲಿ ಎಸ್ಸಿಯಲ್ಲಿನ ಎಲ್ಲ ಜಾತಿಗಳ ಮೂಲ ಜಾತಿ ಜೊತೆಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಹಿಂದುಳಿಯುವಿಕೆ ಗುರುತಿಸಲು ರಾಜ್ಯ ಸರ್ಕಾರ ತಮ್ಮ ನೇತೃತ್ವದಲ್ಲಿ ನಡೆಸಿದ ಜಾತಿಗಣತಿ ಸಮೀಕ್ಷೆ ಕಾರ್ಯ ಯಶಸ್ವಿಗೊಂಡಿದ್ದು, ದೇಶಕ್ಕೆ ಮಾದರಿ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದರು.ಮೇ 5ರಂದು ಆರಂಭಗೊಂಡ ಸಮೀಕ್ಷೆ ಕಾರ್ಯ  ರಾಜ್ಯಾದ್ಯಂತ ಜೂನ್ 30 ಹಾಗೂ ಬೆಂಗಳೂರು ಮಹಾನಗರ ಪಾಲಿಕೆಗೆ…

Read More

ಚಿತ್ರದುರ್ಗ ಜು. 07: ಗಾಣಿಗ ಸಮಾಜದ ತೈಲೇಶ್ವರ ಸ್ವಾಮೀಜಿ ಸಚಿವ ಶಿವರಾಜ್ ತಗಂಡಗಿ ಮೇಲೆ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದು, ಅವರು ಕಮಿಷನ್ ಮೇಲೆ ಬದುಕುವಂತ ಜನ ಅಲ್ಲ, ನ್ಯಾಯ ನಿಷ್ಠೆಯಿಂದ ರಾಜಕೀಯ ಜೀವನದಲ್ಲಿ ಇದ್ದಾರೆಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ಸಚಿವರ ಮೇಲೆ ಬಂದಿರುವ ಆರೋಪವನ್ನು ತಳ್ಳಿ ಹಾಕಿದ್ದಾರೆ. ಚಿತ್ರದುರ್ಗ ನಗರದ ಹೊರ ವಲಯದ ಭೋವಿ ಗುರು ಪೀಠದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತಾಡಿ,ಶ್ರೀಗಳು ಸಚಿವ ಶಿವರಾಜ್ ತಗಂಡಗಿ ಪ್ರಮಾಣಿಕವಾಗಿ ರಾಜಕೀಯ ನಡೆಸುತ್ತಿದ್ದಾರೆ, ಅವರು ಯಾರಿಂದಲೂ ಹಣ ಪಡೆದಿಲ್ಲ. ರಾಜಕೀಯದಿಂದ ಹಣ ಮಾಡುವ ಉದ್ದೇಶ ಅವರಲ್ಲಿಲ್ಲ. ತಮ್ಮ ಜೀವನದಲ್ಲಿ ಕಾಯಕ ಪ್ರವೃತ್ತಿ ರೂಢಿಸಿಕೊಂಡವರು ತಮ್ಮಲ್ಲಿರುವುದನ್ನು ಬೇರೆಯವರೊಂದಿಗೆ ಹಂಚಿ ಊಟ ಮಾಡುತ್ತಾರೆಂದರು. ಸರ್ಕಾರದಲ್ಲಿ ಯಾವುದೇ ಅನುದಾನ ಬಿಡುಗಡೆಯಾಗಬೇಕಾದರೂ ಅದಕ್ಕೆ ತನ್ನದೆ ನಿಯಮಗಳಿವೆ. ಅದನ್ನು ಪಾಲಿಸಬೇಕಿದೆ, ಸರ್ಕಾರದಿಂದ ಬಿಡುಡಗೆಯಾಗುವ ಅನುದಾನದಲ್ಲಿ 1 ಕೋಟಿಗಿಂತ ಕಡಿಮೆ ಇದ್ದರೆ ಸಚಿವರೇ ಬಿಡುಗಡೆ ಮಾಡುತ್ತಾರೆ. ಆದರೆ 1 ಕೋಟಿಗಿಂತ ಹೆಚ್ಚಾದರೆ ಅ ಕಡತ ಮುಖ್ಯಮಂತ್ರಿ ಬಳಿ ಹೋಗುತ್ತದೆ.…

Read More

ಜಾತಿಗಣತಿ ಸರ್ವೇ ಮತ್ತೇ ವಿಸ್ತರಿಸದೆ ಒಳಮೀಸಲಾತಿ ಶೀಘ್ರ ಜಾರಿಗೆ ಕ್ರಮಕೈಗೊಳ್ಳಿ:ಮಾಜಿ ಸಚಿವ ಎಚ್.ಆಂಜನೇಯ ಚಿತ್ರದುರ್ಗ, ಜು.2: ಒಳಮೀಸಲಾತಿ ಜಾರಿಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ಸಮೀಕ್ಷೆ ಕಾರ್ಯ ಮತ್ತೆ ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡಬಾರದು ಎಂದು ಮಾಜಿ ಸಚಿವ ಎಚ್.ಆಂಜನೇಯ ಕೋರಿದರು. ಬೆಂಗಳೂರಿನಲ್ಲಿ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಆಯೋಗದ ಕಚೇರಿಗೆ ಬುಧವಾರ ಭೇಟಿ ಮಾಡಿ ಮನವಿ ಮಾಡಿಕೊಂಡ ಅವರು, ಮೂರು ದಶಕಗಳ ಮಾದಿಗ ಸಮುದಾಯದ ಸಮಗ್ರ ಹೋರಾಟದ ಫಲ ಒಳಮೀಸಲಾತಿ ಜಾರಿಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದ್ದು, ಅದನ್ನು ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬದ್ಧರಾಗಿದ್ದಾರೆ. ಆದರೆ, ಎಕೆ, ಎಡಿ, ಆದಿಆಂಧ್ರ ಈ ಮೂರು ಜಾತಿಸೂಚಕಗಳಲ್ಲಿ ಮಾದಿಗ, ಛಲವಾದಿ ಸಮುದಾಯದವರುಗುರುತಿಸಿಕೊಂಡಿರುವುದೇ ಮೀಸಲಾತಿ ಹಂಚಿಕೆ ಸಮಸ್ಯೆ ಆಗಿದೆ ಎಂದರು. ಈ ಗೊಂದಲಕ್ಕೆ ತೆರೆ ಎಳೆದು ಅವರರ ಸಂಖ್ಯೆ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಗುರುತಿಸಲು ಪರಿಶಿಷ್ಟರಿಗೆ ಸೀಮಿತಗೊಳಿಸಿ ರಾಜ್ಯದಲ್ಲಿ ಮೇ 5ರಂದು ಜಾತಿಗಣತಿ ಸಮೀಕ್ಷೆ ಆರಂಭಗೊಂಡಿದೆ. ಆರಂಭದಲ್ಲಿ ತಾಂತ್ರಿಕ ಸಮಸ್ಯೆ ಕಾರಣಕ್ಕೆ ಆತಂಕ,ಗೊಂದಲಕ್ಕೆ…

Read More

ಕಾಯಕವೇ ಕೈಲಾಸ ದಾಸೋಹವೇ ದೇವಧಾಮ. ಅನ್ನ ದಾಸೋಹವು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಅನ್ನದಾನವು ಕೇವಲ ಆಹಾರವನ್ನು ದಾನ ಮಾಡುವುದಲ್ಲ, ಅದು ಕರುಣೆ, ಸಹಾನುಭೂತಿ ಮತ್ತು ಸಮಾಜ ಸೇವೆಯ ಸಂಕೇತವಾಗಿದೆ. ಎಂದು ಭೋವಿಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಭಾರತೀಯ ರೈಲ್ವೆ ಬೋರ್ಡಿನ ಮಾಜಿ ಸದಸ್ಯರಾದ ಡಾ.ಕೆ.ವಿ ಸಿದ್ಧರಾಜು ಕುಟುಂಬದಿಂದ ನಗರದ ಹೊರವಲಯದಲ್ಲಿರುವ ಎಸ್ ಜೆ ಎಸ್ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಹಾಗೂ ಅನ್ನದಾಸೋಹದ ಕೈಂಕರ್ಯವನ್ನು ನೆರವೇರಿಸಿದರು. ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು ವಿವಿಧ ಶ್ರೇಷ್ಠ ದಾನಗಳಲ್ಲಿ ಒಂದಾದ ಅನ್ನದಾನದ ಮಹತ್ವ ಅರಿತವರು ಡಾ.ಕೆ.ವಿ.ಸಿದ್ಧರಾಜು. ಒಂದು ತುತ್ತು ಅನ್ನಕ್ಕೆ ಪರದಾಡುವ ಜನರಿಗೆ ಅನ್ನವೇ ದೇವರು ಆಗಿರುತ್ತದೆ. ಅನ್ನವೇ ಬದುಕಾಗಿರುತ್ತದೆ. ಅನ್ನವಿಲ್ಲದೇ ಈ ಜಗತ್ತಿನಲ್ಲಿ ಹಲವಾರು ಜನ ಪರದಾಡುತ್ತಾರೆ. ಈ ರೀತಿಯ ಬದುಕನ್ನು ಕಂಡ ಸಿದ್ಧರಾಜು ಅವರು ಬಾಲ್ಯದಲ್ಲಿ ಒಪ್ಪತ್ತಿನ ಗಂಜಿಗೂ ಅಲೆದಾಟ ನಡೆಸಿದ್ದಾರೆ. ಆಹಾರಕ್ಕಾಗಿ ಬದುಕಿನ ಹೊರಾಟ ಪ್ರಾರಂಭಿಸಿದ್ದಾರೆ. ಇಂದು…

Read More

ಸಾರ್ವಜನಿಕರ ಬದುಕನ್ನು  ನಿಮ್ಮ ಸ್ವಂತ ಬದುಕೆಂದು ಅರ್ಥಮಾಡಿಕೊಂಡು, ನಿಮ್ಮ ಬಳಿ ಬರುವವರಿಗೆ ಕೆಲಸ ಮಾಡಿಕೊಡಿ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಕಂದಾಯ ಇಲಾಖೆ ನೌಕರರಲ್ಲಿ ಮನವಿ ಮಾಡಿದರು. ಕಂದಾಯ ಇಲಾಖೆ ವತಿಯಿಂದ ಹೊಳಲ್ಕೆರೆ ತಾಲ್ಲೂಕು ಕಚೇರಿಯಲ್ಲಿ ಬುಧವಾರ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‍ಟಾಪ್ ವಿತರಿಸಿ ಮಾತನಾಡಿದರು. ಸ್ವಾತಂತ್ರ್ಯ ಪೂರ್ವ ನಂತರದಲ್ಲಿ ಎಷ್ಟೊ ದಾಖಲೆಗಳು ಸಿಗುತ್ತಿರಲಿಲ್ಲ. ಹಾಗಾಗಿ ಗಣಕೀಕೃತ ಕಾಗದ ಪತ್ರಗಳಿಗೆ ಈಗ ಬಹಳ ಪ್ರಾಮುಖ್ಯತೆಯಿದೆ. ಕಂದಾಯ ಇಲಾಖೆ ನೌಕರರ ಮೇಲೆ ಸಾರ್ವಜನಿಕರಿಂದ ಸಾಕಷ್ಟು ಆಕ್ಷೇಪಣೆಗಳಿವೆ. ಜನಸಾಮಾನ್ಯರಿಗೆ ಸಿಗಬೇಕಾದ ಸೌಲಭ್ಯಗಳನ್ನು ಮುಟ್ಟಿಸುವುದಕ್ಕಾಗಿ ಸರ್ಕಾರ ನಿಮಗೆ ಲ್ಯಾಪ್‍ಟಾಪ್‍ಗಳನ್ನು ಕೊಟ್ಟಿದೆ. ಬಳಸಿಕೊಂಡು ಸರಿಯಾಗಿ ಕೆಲಸ ಮಾಡಿ ಎಂದು ಗ್ರಾಮ ಆಡಳಿತಾಧಿಕಾರಿಗಳಿಗೆ ಸೂಚಿಸಿದರು. ಜನನ, ಮರಣ ಪ್ರಮಾಣ ಪತ್ರಗಳಿಂದ ಹಿಡಿದು ಪಹಣಿ, ಆಸ್ತಿ ಹದ್ದುಬಸ್ತು ಪ್ರತಿಯೊಂದು ನಿಮ್ಮ ಕೈಯಿಂದಲೇ ಆಗಬೇಕು. ನೀವುಗಳು ನ್ಯಾಯಯುತವಾದ ಬೇಡಿಕೆಗಳಿಗೆ ಮುಷ್ಕರ ನಡೆಸುವುದು ತಪ್ಪಲ್ಲ. ಸರ್ಕಾರ ಕೂಡ ನಿಮಗೆ ಸ್ಪಂದಿಸಿದೆ. ಸಾರ್ವಜನಿಕರು ವಿಶ್ವಾಸವಿಟ್ಟು ನಿಮ್ಮ ಬಳಿ ಬರುತ್ತಾರೆ. ಕೆಲಸದ ನಿಮಿತ್ತ ಕಚೇರಿಗೆ ಬರುವವರನ್ನು ವಿನಾ ಕಾರಣ…

Read More

ಹೊಳಲ್ಕೆರೆ,ಜೂ18 : ಮೂರ್ನಾಲ್ಕು ತಿಂಗಳಲ್ಲಿ ನಿವೇಶನಗಳನ್ನು ವಿಂಗಡಿಸಿ ಮುಂದಿನ ದಿನಗಳಲ್ಲಿ ಮನೆಗಳನ್ನು ಕಟ್ಟಿಸಿಕೊಡುತ್ತೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ಭರವಸೆ ನೀಡಿದರು. ಭರಮಸಾಗರ ಹೋಬಳಿ ಬಹದ್ದೂರ್‍ಘಟ್ಟ ಹೊಸಹಟ್ಟಿ ಗ್ರಾಮದಲ್ಲಿ 1.45 ಕೋಟಿ ರೂ.ವೆಚ್ಚದಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣ ಕಾಮಗಾರಿ ಮತ್ತು ಅಂಗನವಾಡಿ ಕೇಂದ್ರ ಕಟ್ಟಡ ಕಾಮಗಾರಿಗೆ ಬುಧವಾರ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು. ಹೊಸದಾಗಿ ಮತ ಕೇಳಲು ಬಂದಾಗ ಭರಮಸಾಗರದಲ್ಲಿ ಓಡಾಡಲು ರಸ್ತೆಗಳಿರಲಿಲ್ಲ. ಗೆದ್ದ ನಂತರ ಎಲ್ಲಾ ಹಳ್ಳಿಗಳಲ್ಲಿಯೂ ರಸ್ತೆಗಳನ್ನು ಮಾಡಿಸಿದ್ದರಿಂದ ರಸ್ತೆ ರಾಜ ಎಂಬ ಬಿರುದು ನೀಡಿ ಹೆಗಲ ಮೇಲೆ ಎತ್ತಿಕೊಂಡು ಕುಣಿಸಿ ಎರಡನೆ ಬಾರಿಗೂ ನನ್ನನ್ನು ಭರಮಸಾಗರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಗೆಲ್ಲಿಸಿದ್ದೀರಿ. ಹಾಗಾಗಿ ನಿಮ್ಮಗಳ ಋಣ ನನ್ನ ಮೇಲಿರುವುದರಿಂದ ಎಲ್ಲಾ ಜಾತಿ ಜನಾಂಗದವರನ್ನು ಪ್ರೀತಿ, ಗೌರವದಿಂದ ಕಾಣುವುದರ ಜೊತೆಗೆ ಅಭಿವೃದ್ದಿ ಕೆಲಸಗಳನ್ನು ಮಾಡಿಸುತ್ತಿದ್ದೇನೆಂದು ತಿಳಿಸಿದರು. ಜಗಳೂರು, ಮಾಯಕೊಂಡ, ದಾವಣಗೆರೆ ಶಾಸಕರುಗಳು ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಣವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐದು ಉಚಿತ ಗ್ಯಾರೆಂಟಿಗಳಿಗೆ ಹಣವನ್ನು ಬಳಸುತ್ತಿದ್ದಾರೆಂದು ನೊಂದುಕೊಳ್ಳುತ್ತಿದ್ದಾರೆ. ಅದೇ…

Read More

*ಪತ್ರಿಕಾ ಪ್ರಕಟಣೆ ಕೃಪೆಗಾಗಿ* ಜಾತಿಗಣತಿ ಸರ್ವೇ ವಿಸ್ತರಣೆ ಬೇಡ ಒಳಮೀಸಲಾತಿ ಜಾರಿಗೆ ಶೀಘ್ರ ಕ್ರಮ ಅಗತ್ಯಮಾಜಿ ಸಚಿವ ಎಚ್.ಆಂಜನೇಯ ಒತ್ತಾಯ ಬೆಂಗಳೂರು, ಜೂ.18: ಜಾತಿಗಣತಿ ಸಮೀಕ್ಷೆ ಕಾರ್ಯವು ಆಮೆನಡಿಗೆಯಲ್ಲಿ ಆರಂಭಗೊಂಡು, ಈಗ ಅತ್ಯಂತ ಚುರುಕು ಪಡೆದುಕೊಂಡಿದೆ. ಜೊತೆಗೆ ಬಹಳಷ್ಟು ಅವಕಾಶವನ್ನು ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ಆಯೋಗವು ನೀಡಿದೆ. ಆದ್ದರಿಂದ ಜೂ.22 ಅಂತಿಮ ದಿನ ಆಗಬೇಕು. ಮತ್ತೊಮ್ಮೆ ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡಬಾರದು ಎಂದು ಮಾಜಿ ಸಚಿವ ಎಚ್.ಆಂಜನೇಯ ಒತ್ತಾಯಿಸಿದರು. ಜಾತಿಗಣತಿ ಸರ್ವೇ ಕಾರ್ಯದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಿಸಲು ಮಹದೇವಪುರ ವಿಧಾನಸಭಾ ಕ್ಷೇತ್ರದ ಹೂಡಿ ವ್ಯಾಪ್ತಿಯ ಪರಿಶಿಷ್ಟರ ವಾಸದ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು. ಆಂಜನೇಯ ಅವರು ಪ್ರದೇಶಕ್ಕೆ ಪ್ರವೇಶಿಸುತ್ತಿದ್ದಂತೆ ಸ್ಥಳೀಯ ಮುಖಂಡರು, ಮಾದಿಗ ಸಮುದಾಯದವರು ಅದ್ದೂರಿಯಾಗಿ ಬರಮಾಡಿಕೊಂಡು ಮನೆ ಮನೆಗೆ ಭೇಟಿ ಮಾಡಿಸಿದರು. ಈ ವೇಳೆ ಜಾತಿಗಣತಿ ಸರ್ವೇ ವೇಳೆ ನೊಂದಾಯಿಸಿದ್ದರ ಬಳಿ ನೀವು ಏನೆಂದು ಬರೆಯಿಸಿದ್ದೀರಾ ಎಂದು ಆಂಜನೇಯ ಪ್ರಶ್ನೀಸಿದರು. ಜಾತಿ ಆದಿಕರ್ನಾಟಕ, ಮೂಲ ಜಾತಿ ಮಾದಿಗ 061…

Read More

ಚಿತ್ರದುರ್ಗ: ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಎಸ್.ಎಲ್.ವಿ. ಪದವಿಪೂರ್ವ ಕಾಲೇಜಿಗೆ ನೀಟ್ ಪರೀಕ್ಷೆಯಲ್ಲಿ ದಾಖಲೆಯ ಫಲಿತಾಂಶ ಲಭಿಸಿದೆ. ವೈದ್ಯಕೀಯ ಕೋರ್ಸ್ ಆಯ್ಕೆಗಾಗಿ ನಡೆದ 2025 ರ ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಾದ ರಕ್ಷಿತಾ ಕೆ. 561/720 ಎಐಆರ್. 2100 ರ್ಯಾಂಕ್, ಕ್ರಾಂತಿ ಕೆ. 501 ಎಐಆರ್ 6627 ರ್ಯಾಂಕ್‍ನೊಂದಿಗೆ ರಾಷ್ಟ್ರಮಟ್ಟದಲ್ಲಿ ಉತ್ತಮ ಫಲಿತಾಂಶ ಪಡೆದಿದ್ದಾರೆ. 37 ವಿದ್ಯಾರ್ಥಿಗಳು ಕಾಲೇಜಿನಲ್ಲಿ ವೈದ್ಯಕೀಯ ಕೋರ್ಸ್‍ಗೆ ಅರ್ಹತೆ ಪಡೆದಿದ್ದಾರೆ. ಸೃಷ್ಠಿ ಆರ್. ಚೇತನ್ ಜಿ.ಎಂ. ಸಿಂಚನ, ಸಂತೋಷ್‍ಕುಮಾರ್, ಭುವನ ಜಿ.ಎಸ್ ಮತ್ತಿತರೆ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಗಳಿಸಿದ್ದಾರೆ. ನುರಿತ ಉಪನ್ಯಾಸಕರಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ನಡೆಸಲಾಗುವ ವಿಶೇಷ ತರಗತಿಗಳ ಮೂಲಕ ಸೂಕ್ತ ಮಾರ್ಗದರ್ಶನ ನೀಡಿದ ಪರಿಣಾಮ ನೀಟ್ ಪರೀಕ್ಷೆಯಲ್ಲಿ, ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯವಾಯಿತೆಂದು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಎಂ.ಚಂದ್ರಪ್ಪ, ಆಡಳಿತಾಧಿಕಾರಿ ಚಂದ್ರಕಲಾ ಹೆಚ್. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್, ಪ್ರಾಚಾರ್ಯರಾದ ಕೇಶವಮೂರ್ತಿ ಯು. ಇವರುಗಳು ಶ್ಲಾಘಿಸಿದ್ದಾರೆ.

Read More