ಹಳೇ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಯೊಬ್ಬ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಮಹದೇವನಕಟ್ಟೆ ಗ್ರಾಮದ ಬಳಿ ನಡೆದಿದೆ. ಕೊಲೆಗೀಡಾದ ಮಹಿಳೆಯನ್ನು ಭಾಗ್ಯಮ್ಮ ಎಂದು ಗುರುತಿಸಲಾಗಿದ್ದು, ಎರಡು ದಿನಗಳ ಹಿಂದೆ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದ್ದು, ಮಹಿಳೆಯ ಶವವು ವೀರಭದ್ರಪ್ಪ ಎಂಬುವರ ಜಮೀನಿನಲ್ಲಿ ಪತ್ತೆಯಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.