ಬಸವಣ್ಣನವರ  ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು

ಜಿಲ್ಲಾ ಸುದ್ದಿ

ಬಸವಣ್ಣನವರ  ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಬಸವಾದಿ ಶರಣರ ವಚನಗಳು ಹಿಂದೆ, ಇಂದು ಹಾಗೂ ಮುಂದೆಯೂ ಪ್ರಸ್ತುತವಾಗಿರಲಿವೆ ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಎಸ್. ಜೆ. ಸೋಮಶೇಖರ್ ಹೇಳಿದರು. ಅವರು
ಸಾಂಸ್ಕೃತಿಕ ನಾಯಕ ವಿಶ್ವ ಗುರು ಬಸವಣ್ಣನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತಾಡಿದರು. ನುಡಿದಂತೆ ನೆಡೆದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ. ವರ್ಗರಹಿತ, ಜಾತಿರಹಿತ,ಮೌಢ್ಯಗಳಿಲ್ಲದ ವೈಚಾರಿಕತೆ ಸಮಾಜ ಸ್ಥಾಪನೆಯ ಆಶಯದಿಂದ ಅವರು ವಚನಗಳನ್ನ ರಚಿಸಿದರು. ಕಾಯಕ, ದಾಸೋಹವನ್ನ ಬೋಧಿಸಿದ ಬಸವಣ್ಣನವರು ಯಾರು ಕುಳಿತು ತಿನ್ನದೆ ಕಾಯಕದಲ್ಲಿ ತೊಡಗಬೇಕೆಂದು ಪ್ರತಿಪಾದಿಸಿದ್ದರು ಎಂದರು.
ಈ ಸಂದರ್ಭದಲ್ಲಿ ಉಪ ಕಾರ್ಯದರ್ಶಿಗಳು, ಯೋಜನಾ ನಿರ್ದೇಶಕರು ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

 

 

Leave a Reply

Your email address will not be published. Required fields are marked *