ಬಿಜೆಪಿ ಯುವ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಭಾರ್ಗವಿ ದ್ರಾವಿಡ್ ನೇಮಕ

ರಾಜ್ಯ

ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಯಾಗಿ ಚಿತ್ರದುರ್ಗದ ಶ್ರೀಮತಿ ಎನ್.ಬಿ.ಭಾರ್ಗವಿ ದ್ರಾವಿಡ್ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದರಾದ ತೇಜಸ್ವಿ ಸೂರ್ಯ.ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜ್ ರವರು ಅಧಿಕೃತ ನೇಮಕ ಪತ್ರ ನೀಡುವುದರ ಮೂಲಕ ಆಯ್ಕೆ ಮಾಡಲಾಯಿತು. ಭಾರ್ಗವಿ ದ್ರಾವಿಡ್ ಅವರು ಈ ಹಿಂದೆ ಭಾರತ ಸರ್ಕಾರವು ಚಿತ್ರದುರ್ಗ ನೆಹರು ಯುವ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿತ್ತು. ಹಾಗೂ ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಾಗಿತ್ತು.ಎಸ್.ಸಿ.ಮೋರ್ಚಾದ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾಗಿ ಪ್ರವಾಸ ಕೈಗೊಂಡು ಕೆಲಸ ಮಾಡಿದ್ದರು. ಎ.ಬಿ.ವಿ.ಪಿ ಸಂಘಟನೆಯಲ್ಲಿಯೂ ಸಹ ಸಾಕಷ್ಟು ರಾಜ್ಯ ಮಟ್ಟದ ಜವಾಬ್ದಾರಿಗಳನ್ನು ನಿಭಾಯಿಸಿದ್ದರು.ಬರುವ 2024 ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಕೂಡ ಆಗಿದ್ದಾರೆ.

 

 

 

Leave a Reply

Your email address will not be published. Required fields are marked *