Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಭೋವಿ ಅಭಿವೃದ್ದಿ ನಿಗಮ‌ ಸುಲಿಗೆ ಕೇಂದ್ರವಲ್ಲ
ರಾಜ್ಯ

ಭೋವಿ ಅಭಿವೃದ್ದಿ ನಿಗಮ‌ ಸುಲಿಗೆ ಕೇಂದ್ರವಲ್ಲ

D KumaraswamyBy D KumaraswamyJuly 7, 2024Updated:July 7, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಪಕ್ಷಾತೀತವಾಗಿ ಸಮಾಜವನ್ನು ಸಂಘಟಿಸಬೇಕು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ಹೇಳಿದರು.
ನಗರದ ಹೊರವಲಯದಲ್ಲಿರುವ ಭೋವಿ ಗುರುಪೀಠದಲ್ಲಿ ಭಾನುವಾರ ನಡೆದ ದೀಕ್ಷಾ ರಜತ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮಾಜವನ್ನು ಎಲ್ಲಾ ಪಕ್ಷದ ಸಮಾಜದ ಬಾಂಧವರು ಸೇರಿ ಸಂಘಟಿಸುವುದರೊಟ್ಟಿಗೆ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಜುಲೈ 20 ರಂದು ನಡೆಸಬೇಕು ಎಂದರು. ರಾಜಕೀಯ ಶಕ್ತಿ ಹೆಚ್ಚಿಸಿಕೊಳ್ಳಬೇಕು, ಭೋವಿ ನಿಗಮ ಕಟ್ಟ ಕಡೆಯ ಭೋವಿ ವ್ಯಕ್ತಿಯನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶ ಹೊಂದಿದೆ ಎಂದರು.
ಶ್ರೀಗಳ ಪರಿಶ್ರಮದಿಂದ ಭೋವಿ ಸಮಾಜ ಸಂಘಟನಾ ಸಮಾಜವಾಗಿ ಹೊರಹೊಮ್ಮಿದೆ. ಸರ್ಕಾರದಲ್ಲಿ ರಾಜಕಾರಣಿಗಳ ಮಾತಿಗಿಂತ ಶ್ರೀಗಳ ಮಾತಿಗೆ ಹೆಚ್ಚು ಮೌಲ್ಯವಿದೆ. ಸಮಾಜಕ್ಕೆ ಸಾಮಾಜಿಕ ನ್ಯಾಯ ದೊರಕಿಸುವಲ್ಲಿ ಶ್ರೀಗಳ ಸಂಘಟನಾ ಶಕ್ತಿ ಪರಿಣಾಮಕಾರಿಯಾಗಿದೆ. ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು, ರಾಜಕೀಯ ಪ್ರಮುಖರು, ಶ್ರೀಗಳ ಬಳಿ ಬರುತ್ತಿದ್ದಾರೆ.
ಶ್ರೀಗಳ ಜೊತೆಗಿನ ಪ್ರವಾಸದಲ್ಲಿ ಅವರ, ಸಹನೆ, ತಾಳ್ಮೆ, ಜಾಣ್ಮೆ, ಚಾಕಚಕ್ಯತೆ, ಚುರುಕುತನ ತಿಳಿದುಕೊಂಡಿದ್ದು, ನನ್ನ ಬದುಕಿನಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದೇನೆ.ಶ್ರೀಮಠಕ್ಕೂ ನಾವು ಕಾಳಜಿ ವಹಿಸಬೇಕು ಎಂದರು.
ಭೋವಿ ಅಭಿವೃದ್ಧಿ ನಿಗಮ ಸುಲಿಗೆ ಕೇಂದ್ರವಲ್ಲ, ಸುಧಾರಣಾ ಕೇಂದ್ರವಾಗಿ ಪರಿವರ್ತಿಸುವೆ. ಸೌಲಭ್ಯ ಪಡೆಯದವರಿಗೆ ಸೌಲಭ್ಯ ಕಲ್ಪಿಸಲಾಗುವುದು, ಬಿ.ಜೆ.ಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಅಧ್ಯಕ್ಷರನ್ನು ನೇಮಕ ಮಾಡಲಿಲ್ಲ, ಅಧಿಕಾರಿಗಳ ದರ್ಪದಿಂದ ನಿಗಮದಲ್ಲಿ ಅವ್ಯವಸ್ಥೆಯಾಗಿದೆ. ಎಸ್.ಐ.ಟಿ ತನಿಖೆಯಿಂದ ಸತ್ಯ ತಿಳಿಯುತ್ತದೆ ಎಂದರು.
ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ಶ್ರೀ ತಿಪ್ಪೇಸ್ವಾಮಿ ಮಾತನಾಡಿ, ಯಾವ ಪಕ್ಷದಿಂದಲೂ ಸಂಸತ್ ಚುನಾವಣೆಗೆ ಜಿಲ್ಲೆಯಲ್ಲಿ ಟಿಕೆಟ್ ಸಿಗದಿರುವುದಕ್ಕೆ ಒಗ್ಗಟ್ಟಿನ ಕೊರತೆ ಕಾರಣ. ಟಿಕೆಟ್ ಬೇಕಾದಾಗ ಎಲ್ಲರೂ ಬರುತ್ತಾರೆ, ನಂತರ ಯಾರು ಸೇರುವುದಿಲ್ಲ ಸ್ವಾಮೀಜಿಯವರಿಂದ ಮಾತ್ರ ಸಮಾಜವನ್ನು ಒಗ್ಗಟ್ಟಾಗಿ ಸಂಘಟಿಸಲು ಸಾಧ್ಯವಾಗಿದೆ.ರಾಜಕಾರಣಿಗಳು ಸಮಾಜವನ್ನು ಕೈಹಿಡಿದೆತ್ತುವ ಕೆಲಸ ಮಾಡಬೇಕೆಂದರು.
ಸೂರಗೊಂಡನಹಳ್ಳಿ ಕೃಷ್ಣಮೂರ್ತಿ ಮಾತನಾಡಿ ಸಂಕಷ್ಟದಲ್ಲಿರುವವರನ್ನು ಸಂತೈಸುವ ಸಂತ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ. ಸ್ತ್ರೀ ಸಂಕುಲವನ್ನು ಜಾಗೃತಿ ಮೂಡಿಸೋಣ, ಹೋರಾಟದ ಪಥದಲ್ಲಿರುವ ಗುರುಗಳಿಗೆ ರಕ್ಷ ಕವಚವಾಗಿ ಸಂಘ ಸಂಸ್ಥೆಯ ಮುಖಂಡರು ನಿಲ್ಲಬೇಕು. ಸಕುಟುಂಬ ಸಮೇತರಾಗಿ ದೀಕ್ಷಾ ಮಹೋತ್ಸವದಲ್ಲಿ ಭಾಗವಹಿಸಲು ಪ್ರೇರಣಾ ನೀಡುವ ಜಾಗೃತಿ ಯಾತ್ರೆ ಮಾಡೋಣ ಎಂದರು.ಜಾಗೃತಿ ಮೂಡಿಸುವ ಕೆಲಸ ಮಾಡದಿದ್ದರೆ ಸಂಘಟನಾ ಮನೋಭಾವ ಇಲ್ಲದಾಗುತ್ತದೆ ಎಂದು ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ತಿಳಿಸಿದರು.

 

 

ಸಮುದಾಯದ ಜನತೆಗೆ ಸಂಘಟನೆಯನ್ನು ಮೂಡಿಸಿದರೆ ರಾಜಕೀಯವಾಗಿ ತೀಕ್ಷ್ತೆಯನ್ನು ಬೆಳೆಸಿಕೊಳ್ಳುತ್ತಾರೆ. ಚಿಕ್ಕ ಸಭೆಗಳೇ ಬೃಹತ್ ಸಭೆಗಳಾಗಿ ಹೊರಹೊಮ್ಮುತ್ತವೆ ಹಾಗಾಗಿ ಸಂಘಟನೆಯನ್ನು ನಿರಂತರವಾಗಿ ಮಾಡಬೇಕು ಎಂದು ಹೇಳಿದರು.
ಜನರು ವಿಧಾನಸಭೆಯ ಹೊರಗೆ ಧ್ವನಿ ಎತ್ತಬೇಕು, ಜನಪ್ರತಿನಿಧಿಗಳು ವಿಧಾನಸಭೆಯ ಒಳಗೆ ಸಮಾಜದ ಧ್ವನಿಯಾದಾಗ ಮಾತ್ರ ಸಂಘಟನೆಯಾದಂತೆ ಎನ್ನುವುದನ್ನು ಪ್ರತಿಯೊಬ್ಬರು ಅರಿಯಬೇಕು ಎಂದರು. ಸಂಘಟನೆ ಜನರ ಜೊತೆ ಇರಬೇಕು ಆಗ ಗಟ್ಟಿಯಾಗುತ್ತದೆ ಹಾಗೂ ಜನರ ಜೊತೆ ಸದಾಕಾಲ ಸಧೃಢವಾಗಿ ಉಳಿಯಲು ಮತ್ತು ಬದುಕಲು ಅವಕಾಶ ಒದಗಿಸುತ್ತದೆ. ಸಮಾಜ ಸಂಘಟನೆಯ ಬಗ್ಗೆ ನಿರಂತರ ಯೋಜನೆ ಮತ್ತು ಸಮಾಲೋಚನೆ ಮಾಡಬೇಕು. ಆರ್ಥಿಕವಾಗಿ ಸಬಲತೆ ಇರುವ ಸಮಾಜಕ್ಕೆ ಗೌರವ ಹೆಚ್ಚು ಹಾಗಾಗಿ ಶಿಕ್ಷಣ, ಆರ್ಥಿಕ ಸಬಲತೆಗೆ ಹೆಚ್ಚು ಮಹತ್ವ ಕೊಡಬೇಕು, ಸಮಾಜಕ್ಕೆ ಅವಶ್ಯಕವಾದ ಹಕ್ಕುಗಳನ್ನು ಪೂರೈಕೆಗೆ ಸದಾಕಾಲ ಸಂಘಟಿತರಾಗಬೇಕು ಎಂದು ಹೇಳಿದರು.ಹೊಸದುರ್ಗ ಚಂದ್ರಪ್ಪ,
ಹೊಳಲ್ಕೆರೆ ಮಾಸ್ಟರ್ ರಂಗಪ್ಪ ಮಾತಾಡಿದರು.
ವೇದಿಕೆಯಲ್ಲಿ ಎಸ್.ಜೆ.ಎಸ್ ವಿದ್ಯಾಸಂಸ್ಥೆಯ ನಿರ್ದೇಶಕ ವಿ.ಹನುಮಂತಪ್ಪ ಗೋಡೆಮನೆ, ಇ.ಮಂಜುನಾಥ, ಹೆಚ್.ಆಂಜನೇಯ, ಹೊಸದುರ್ಗದ ಸುಬ್ಬಯ್ಯ, ರಾಮಚಂದ್ರಪ್ಪ, ಮಂಜಪ್ಪ, ಎನ್.ಪಿ.ಭರತ್, ಚಂದ್ರಶೇಖರ್, ಉಮೇಶ್, ಭೂತಭೋವಿ, ಭೋವಿ ಗುರುಪೀಠದ ಸಿ.ಇ.ಓ ಗೌನಹಳ್ಳಿ ಗೋವಿಂದಪ್ಪ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕಿನ ಮುಖಂಡರು ಭಾಗವಹಿಸಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಗಾಂಜಾ ಮಾರುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಓರ್ವನ ಬಂಧನ
Next Article ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನ
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.