ಅನಾಮಧೇಯ ವಾಹನಕ್ಕೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವು

ರಾಜ್ಯ

ಹೆಲ್ಮೆಟ್ ಹಾಕದಿದ್ದೆ  ಸಾವಿಗೆ ಕಾರಣವಾಯ್ರು

 

 

 

ಮುಂದೆ ಹೋಗುತ್ತಿದ್ದ ಅನಾಮಧೇಯ ವಾಹನಕ್ಕೆ ಅತೀ ವೇಗವಾಗಿ ಹೋಗಿ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಹಿರಿಯೂರಿನ ಹೈವೇ ಬಳಿ ನಡೆದಿದೆ.
ಮೃತನನ್ನು ಕ್ರಿಸ್ಟಿ ರಾಜ್ (23) ಎಂದು ಗುರುತಿಸಲಾಗಿದೆ. ದಾವಣಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಬೈಕ್ ಸವಾರ ಹೆಲ್ಮೆಟ್ ಧರಿಸಿರಲಿಲ್ಲ, ಮುಂದಿನ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಅತೀ ವೇಗವಾಗಿ ಹಿಂದಿನಿಂದ ಡಿಕ್ಕಿ ಹೊಡದಿದ್ದಾನೆ. ಹೆಲ್ಮೆಟ್ ಇಲ್ಲದ ಕಾರಣ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹಿರಿಯೂರಿನ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಹೈವೇ ಗಳಲ್ಲಿ ದೂರದೂರುಗಳಿಗೆ ಪ್ರಯಾಣ ಮಾಡುವಾಗ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಿ ಪ್ರಯಾಣಿಸಬೇಕು. ಇದರಿಂದ ಪ್ರಾಣ ಹಾನಿ ಕಡಿಮೆ ಎಂದು ಹಿರಿಯೂರಿನ ಪೊಲೀಸರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *