ಬಿಜೆಪಿ ಅಧರ್ಮದ ಮಾರ್ಗದಲ್ಲಿ ದೇಶವನ್ನು ಕೊಂಡೊಯ್ಯುತ್ತಿದೆ

ರಾಜ್ಯ

ಈ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಸಾಧಿಸಬೇಕೆಂದು ವಾಮಮಾರ್ಗವನ್ನು ಹಿಡಿದಿದೆ, ಇದರಿಂದ ದೇಶದ ಖಜಾನೆಗೆ ಕನ್ನವನ್ನು ಹಾಕಿದೆ. ದೇಶದ ಹಣವನ್ನು ಖರ್ಚು ಮಾಡುವುದರ ಮೂಲಕ ಮತದಾರರಿಗೆ ಮೋಸ ಮಾಡುತ್ತಿದೆ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.

ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಬಂದಾಗಿನಿಂದ ದೇಶದಲ್ಲಿ ಕೋಮು ಗಲಭೆಗಳು ಹೆಚ್ಚಾಗಿವೆ. ಶಾಂತಿ ನೆಲೆಸಬೇಕಿದೆ. ಬಿಜೆಪಿ ಅಧರ್ಮದ ಮಾರ್ಗದಲ್ಲಿ ದೇಶವನ್ನು ಕೊಂಡೊಯ್ಯುತ್ತಿದ್ದು, ನಾವೆಲ್ಲಾ ಭಾವನಾತ್ಮಕವಾಗಿ ಜೀವನ ನಡೆಸಬೇಕು ಇದಕ್ಕಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಹೇಳಿದರು.

ದೇಶದಲ್ಲಿ ಮೋದಿ ಪ್ರಧಾನಿಯಾಗಿರುವುದು ದುರ್ವಿದಿ. ಬಿಜೆಪಿ ಸರ್ಕಾರದಲ್ಲಿ ಸಂವಿಧಾನಕ್ಕೆ ಬೆಲೆ ಇಲ್ಲ. ಸಂವಿಧಾನವನ್ನೆ ಬದಲಾಯಿಸಲು ಹೊರಟಿರುವುದು ದುರಂತವಾಗಿದ್ದು, ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಂಗ್ರೆಸ್ ಗೆಲ್ಲಬೇಕಿದೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಗಟ್ಟಿಯಾಗಿ ಅನುಷ್ಟಾನ ಮಾಡುವ ಮೂಲಕ ಅಭಿವೃದ್ದಿಗೆ ಸಹಕಾರ ಮಾಡಿದ್ದೆವೆ. ಇದರಿಂದಾಗಿ ರಾಜ್ಯದ 28 ಸ್ಥಾನಗಳನ್ನು ಗೆಲ್ಲಲಿದ್ದು, ಕರ್ನಾಟಕದಲ್ಲಿ ಮೊಟ್ಟ ಮೊದಲ ಕ್ಷೇತ್ರ ಚಿತ್ರದುರ್ಗ ಗೆಲ್ಲಲಿದ್ದೆವೆ ಎಂದರು.

 

 

 

ಚಿತ್ರದುರ್ಗ ಕಾಂಗ್ರೆಸ್ ಪಕ್ಷದ ಭದ್ರ ಕೋಟೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಚಂದ್ರಪ್ಪ ಸರಳ ಸಜ್ಜನಿಕೆಗೆ ಹೆಸರಾಗಿದ್ದಾರೆ. ಸೌಮ್ಯ ಸ್ವಭಾವ ಹಾಗೂ ಎಲ್ಲಾ ವರ್ಗದ ಜನರೊಂದಿಗೆ ಬೆರೆಯುವ ವ್ಯಕ್ತಿ. ರಾಜಕೀಯದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದಿರುವ ವ್ಯಕ್ತಿಯಾಗಿದ್ದು, ಜನರು ಅವರನ್ಮು ಗೆಲ್ಲಿಸಲಿದ್ದಾರೆ. ಕಾಂಗ್ರೆಸ್ ಪಕ್ಷ ಏನು ಘೋಷಣೆ ಮಾಡಿತ್ತೋ ಅದನ್ನು ಅನುಷ್ಟಾನಕ್ಕೆ ತಂದಿದೆ. ರಾಜ್ಯದಲ್ಲಿನ ಎಲ್ಲಾ ಜನರಿಗೆ ಸೌಲಭ್ಯ ಸಿಕ್ಕಿದೆ. ಹಾಗಾಗಿ ನಾವು ಮತ ಕೇಳಲು ಅರ್ಹರಿದ್ದೆವೆ ಎಂದರು.

ಗ್ಯಾರಂಟಿ ಯೋಜನೆಗಳಿಗೆ 36 ಸಾವಿರ ಕೋಟಿ ಖರ್ಚು ಮಾಡಿದ್ದು, ಇದರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಅಭಿವೃದ್ದಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ. ಬರಪರಿಹಾರ ನಿಭಾಯಿಸಲು ಸೂಕ್ತ ವ್ಯವಸ್ಥೆ ಮಾಡಿದ್ದೆವೆ. ಜಿಲ್ಲಾಡಳಿತಕ್ಕೆ ಪೂರ್ಣ ಅಧಿಕಾರ ಕೊಟ್ಟಿದ್ದೆವೆ. ಕುಡಿಯುವ ನೀರಿನ ಅಹಾಕಾರ ನೀಗಿಸಲು ಯಾರಿಗೂ ಕಾಯುವ ಅಶ್ಯಕತೆ ಇಲ್ಲ ಆ ರೀತಿ ಸಕಲ ವ್ಯವಸ್ಥೆ ಮಾಡಿದ್ದೆವೆ ಎಂದು ಹೇಳಿದ ಅವರು, ಕೇಂದ್ರ ಸರ್ಕಾರ ಬರಪರಿಹಾರ ನೀಡಲು ಸಂಪೂರ್ಣ ವಿಫಲ ಆಗಿದೆ. ಅನಿವಾರ್ಯವಾಗಿ ನ್ಯಾಯಲಯ ಮೆಟ್ಟಿಲು ಏರಬೇಕಾಗಿದೆ. ಬೇರೆ ರಾಜ್ಯಗಳಿಗೆ ಹೊಲಿಸಿದರೆ ನಮಗೆ ಮಲತಾಯಿ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ, ಅಭ್ಯರ್ಥಿ ಬಿ.ಎನ್.ಚಂದ್ರಪ್ಪ, ಡಿಸಿಸಿ ಅಧಕ್ಷ ತಾಜ್‍ಪೀರ್, ಜಿ.ಎಸ್.ಮಂಜುನಾಥ್, ಓ.ಶಂಕರ್ ಮೈಲಾರಪ್ಪ, ಹಾಜರಿದ್ದರು.

Leave a Reply

Your email address will not be published. Required fields are marked *