ಅಪ್ಪರ್ ಭದ್ರಾ ಯೋಜನೆಗೆ 5300 ಕೋಟಿ ತೆಗೆದಿರಿಸಿದ ಕೇಂದ್ರ ಸರ್ಕಾರ

ರಾಜ್ಯ

ಕೇಂದ್ರ ಸರ್ಕಾರದ ಬಜೆಟ್ ಇಂದು ಮಂಡಿಸಿದ್ದು,ರಾಜ್ಯದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ‌ ಅನುದಾನವನ್ನು ನಿರ್ಮಲ ಸೀತಾರಾಮನ್ ಘೋಷಿಸಿದ್ದಾರೆ.

 

 

 

ಬಹಳ ವರ್ಷಗಳಿಂದ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಬೇಕು ಎಂದು ಒತ್ತಡವನ್ನು ರಾಜ್ಯ ಸರ್ಕಾರದ ಮೇಲೆ ಹಾಗೂ ಕೇಂದ್ರ ಸರ್ಕಾರದ ಮೇಲೆ ಹಾಕಲಾಗುತ್ತಿತ್ತು. ಇದಕ್ಕೆ ಈ ಬಾರಿ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಚಿವ ಸಂಪುಟದಲ್ಲಿ ವಿಷಯ ಮಂಡಿಸಿ ಚರ್ಚಿಸಿದ ನಂತರ ಒಪ್ಪಿಗೆ ಪಡೆದಿತ್ತು. ಇಂದು ಬಜೆಟ್ ನಲ್ಲಿ‌ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ ಅದಕ್ಕೆ 5300 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದೆ.

Leave a Reply

Your email address will not be published. Required fields are marked *