Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಹೊಳಲ್ಕೆರೆ ಕ್ಷೇತ್ರದ ರೈತರಿಗೆ ಗುಡ್ ನ್ಯೂಸ್ ಕೊಟ್ಟ ಶಾಸಕ ಚಂದ್ರಪ್ಪ
ರಾಜ್ಯ

ಹೊಳಲ್ಕೆರೆ ಕ್ಷೇತ್ರದ ರೈತರಿಗೆ ಗುಡ್ ನ್ಯೂಸ್ ಕೊಟ್ಟ ಶಾಸಕ ಚಂದ್ರಪ್ಪ

D KumaraswamyBy D KumaraswamyFebruary 5, 2025No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಹೊಳಲ್ಕೆರೆ : ನೀರು ವಿದ್ಯುತ್ ರೈತರಿಗೆ ಎರಡು ಕಣ್ಣುಗಳಿದ್ದಂತೆ ಎಂದು ಭಾವಿಸಿ ಚಿಕ್ಕಜಾಜೂರಿನ ಕೋಟೆಹಾಳ್ ಸಮೀಪ 500 ಕೋಟಿಯಲ್ಲಿ 220 ಕೆ.ವಿ. ವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣ ಮಾಡುತ್ತಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ತಾಲ್ಲೂಕಿನ ಹಿರೆಕಂದವಾಡಿಯಲ್ಲಿ 85 ಲಕ್ಷದಲ್ಲಿ ನೂತನ ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಬುಧವಾರ ಭೂಮಿಪೂಜೆ ಸಲ್ಲಿಸಿ ಮಾತಾಡಿ,
ಜೋಗ್‍ಫಾಲ್ಸ್ ನಿಂದ ನೇರವಾಗಿ ಇಲ್ಲಿಗೆ ವಿದ್ಯುತ್ ಸರಬರಾಜಾಗಲಿದೆ.ಅರಿಶಿನಘಟ್ಟ, ಚಿತ್ರಹಳ್ಳಿ, ತೇಕಲವಟ್ಟಿ, ಎನ್.ಜಿ.ಹಳ್ಳಿ, ತಾಳ್ಯ, ಮಲ್ಲಾಡಿಹಳ್ಳಿ ವಿದ್ಯುತ್ ಕೇಂದ್ರಗಳ ಮೂಲಕ ಎಲ್ಲಾ ಕಡೆ ಕರೆಂಟ್ ಪೂರೈಕೆಯಾಗಲಿದೆ. ದಿನಕ್ಕೆ 8ರಿಂದ 10 ಗಂಟೆ ರೈತರಿಗೆ ವಿದ್ಯುತ್ ನೀಡುತ್ತೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ಭರವಸೆ ಕೊಟ್ಟರು.
ಎಲ್ಲಿ ಹೋದರು ಗೌರವ ಮರ್ಯಾದೆಯಿಟ್ಟುಕೊಂಡಿದ್ದೇನೆ. ರಾಜ್ಯದಲ್ಲಿ ಸರ್ಕಾರ ಯಾವುದಿದೆ ಎನ್ನುವುದು ಮುಖ್ಯವಲ್ಲ. ನಾನು ಕೇಳಿದಷ್ಟು ಅನುದಾನ ಕೊಡುತ್ತದೆ. ಬೋರ್‍ವೆಲ್ ಕೆರೆ ಕಟ್ಟೆಗಳಲ್ಲಿ ನೀರು ತುಂಬಿ ತುಳುಕಾಡುತ್ತಿದೆ. ಒಂದು ವರ್ಷದೊಳಗೆ ವಿದ್ಯುತ್ ಪವರ್‍ಸ್ಟೇಷನ್ ಕಾಮಗಾರಿ ಪೂರ್ಣಗೊಳ್ಳುತ್ತದೆ. ತಾಲ್ಲೂಕಿನಾದ್ಯಂತ ಪ್ರತಿ ಮನೆ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವುದಕ್ಕಾಗಿ ಹಿರಿಯೂರಿನ ವಾಣಿವಿಲಾಸಸಾಗರದ ಮಧ್ಯೆ 40 ಅಡಿ ಆಳದಲ್ಲಿ ಪಿಲ್ಲರ್ ಕಟ್ಟಿ ಪಂಪ್ ಕೂರಿಸಿ ಅರವತ್ತು ಕೋಟಿ ರೂ.ವೆಚ್ಚದಲ್ಲಿ ಫಿಲ್ಟರ್ ಅಳವಡಿಸಲಾಗಿದೆ. ಕ್ಷೇತ್ರಾದ್ಯಂತ 493 ಹಳ್ಳಿಗಳಲ್ಲಿ ಸಿ.ಸಿ.ರಸ್ತೆ ಮಾಡಿಸಿದ್ದೇನೆ. ಸುತ್ತಮುತ್ತಲಿನ ಗ್ರಾಮಸ್ಥರಿಗೆ ಆರೋಗ್ಯದಲ್ಲಿ ಏನಾದರೂ ಏರುಪೇರಾದರೆ ಚಿಕಿತ್ಸೆ ಸಿಗಲಿ ಎನ್ನುವ ಉದ್ದೇಶದಿಂದ 85 ಲಕ್ಷದಲ್ಲಿ ಹೈಟೆಕ್ ಆಸ್ಪತ್ರೆ ಕಟ್ಟಿಸುತ್ತಿದ್ದೇನೆ. ರಸ್ತೆ ಅಗಲೀಕರಣ ಮಾಡಬೇಕಾಗಿರುವುದರಿಂದ ರಸ್ತೆ ಬದಿಯಲ್ಲಿ ಮನೆಗಳಿರುವವರು ಸ್ವಇಚ್ಚೆಯಿಂದ ಮನೆಗಳನ್ನು ಬಿಟ್ಟುಕೊಟ್ಟರೆ ಬೇರೆ ಕಡೆ 7ಲಕ್ಷ ರೂ.ವೆಚ್ಚದಲ್ಲಿ ಒಂದೊಂದು ಆರ್.ಸಿ.ಸಿ. ಮನೆಗಳನ್ನು ಕಟ್ಟಿಸಿ. ವಿದ್ಯುತ್, ನೀರು, ಶೌಚಾಲಯದ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಮ್ಮ ಮಹದೇವಪ್ಪ, ಉಪಾಧ್ಯಕ್ಷ ಲೋಕೇಶಪ್ಪ, ಮಾಜಿ ಅಧ್ಯಕ್ಷ ರಮೇಶ್, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ದೇವರಾಜ್, ಕರಿಯಪ್ಪ
ನಂಜಪ್ಪ, ಹೊಳಲ್ಕೆರೆ ತಾಲ್ಲೂಕು ಆರೋಗ್ಯಾಧಿಕಾರಿ ರೇಖಾ, ಡಾ.ಸುಹೀಲ್ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಹಾಜರಿದ್ದರು

 

 

Share. Facebook Twitter Pinterest LinkedIn Tumblr WhatsApp Email
Previous Articleರಥಸಪ್ತಮಿ ಪ್ರಯುಕ್ತ 108 ಸೂರ್ಯ ನಮಸ್ಕಾರ
Next Article ಮಹಿಳಾ ಆಯೋಗದ ಅಧ್ಯಕ್ಷರ ಮುಂದೆ :ಚಿಕ್ಕಪುರ ಗೊಲ್ಲರಹಟ್ಟಿಯಲ್ಲಿ ದೂರುಗಳ ಸುರಿಮಳೆಗೈದ ಗ್ರಾಮದ ಮಹಿಳೆಯರು
D Kumaraswamy
  • Tumblr

Related Posts

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026

ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

January 6, 2026

ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

December 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.