Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಮಕ್ಕಳು ಬುದ್ದ, ಬಸವ, ಅಂಬೇಡ್ಕರ್ ಮೌಲ್ಯಗಳನ್ನ ಅಳವಡಿಸಿಕೊಳ್ಳಬೇಕು
ರಾಜ್ಯ

ಮಕ್ಕಳು ಬುದ್ದ, ಬಸವ, ಅಂಬೇಡ್ಕರ್ ಮೌಲ್ಯಗಳನ್ನ ಅಳವಡಿಸಿಕೊಳ್ಳಬೇಕು

D KumaraswamyBy D KumaraswamyJanuary 29, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

 

 

ಬುದ್ಧನ ಮಾನವೀಯತೆ ಬಸವ, ಅಂಬೇಡ್ಕರ್ ರ
ಸಮಾನತೆಯಿಂದಾಗಿ ನಾವು ಇಲ್ಲಿದ್ದೇವೆ ಎಂದು ಸಿ.ಎಸ್.ದ್ವಾರಕನಾಥ್ ಹೇಳಿದರು.ಚಿತ್ರದುರ್ಗ
ನಗರದ ಹೊರ ವಲಯದಲ್ಲಿರುವ ಭೋವಿ ಗುರುಪೀಠದಲ್ಲಿ ಹಮ್ಮಿಕೊಂಡಿದ್ದ ಎಸ್.ಜೆ.ಎಸ್ ಜ್ಞಾನ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮೊಟ್ಟ ಮೊದಲಿಗೆ ಸಮಾನತೆ, ಸಹೋದರತೆ, ಸಹಭಾಳ್ವೆಯ ದಾಖಲೆಗಳನ್ನ ಮ್ಯಾಗ್ನಾಕಾಟ್‍ನಿಂದ ನೋಡುತ್ತೇವೆ. ಅದಕ್ಕಿಂತ ಮುಂಚೆಯೇ ಬಸವಾದಿ ಶರಣರು ನಮ್ಮಲ್ಲಿ ಪ್ರತಿಪಾದಿಸಿದ್ದಾರೆ. ಅದನ್ನು ಯಾರು ಮರೆಯಲಿಕ್ಕೆ ಆಗುವುದಿಲ್ಲ. ಈ ರೀತಿ ಸಾಮಾಜಿಕ ನ್ಯಾಯದ ಬಗ್ಗೆ ಮೊಟ್ಟ ಮೊದಲು ಧ್ವನಿ ಎತ್ತಿದ ಬಸವಾದಿ ಶರಣರ ಆದಿಯಲ್ಲಿ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ನಡೆಯುತ್ತಿದ್ದಾರೆ ಹಾಗಾಗಿ ಬಹಳ ಸಂತೋಷ ಎಂದು ತಿಳಿಸಿದರು.
ಸ್ವಾತಂತ್ರ್ಯ ಬಂದ ನಂತರ ಸಿಕ್ಕಿದ್ದು ಸಂವಿಧಾನ, ನಮ್ಮ ಸಂವಿಧಾನಕ್ಕೂ ಬಸವಣ್ಣನವರ ವಚನಗಳಿಗೂ ಯಾವುದೆ ವ್ಯತ್ಯಾಸವಿಲ್ಲ, ನಾನು ಅನೇಕ ಸಲ ಹೇಳುತ್ತಿರುತ್ತೇನೆ, ಸಂವಿಧಾನದ ಪ್ರತಿ ಅನುಚ್ಛೇದಕ್ಕೂ ಬಸವಾದಿ ಶರಣರ ಅನೇಕ ವಚನಗಳನ್ನು ಅಡಿ ಟಿಪ್ಪಣಿಗಳಾಗಿ ಕೊಡಬಹುದು. ನಾವೆಲ್ಲ ಇಂದು ಇಲ್ಲಿ ಕುಳಿತಿದ್ದೇವೆ ಎಂದರೆ ಸಂವಿಧಾನ ಕೊಟ್ಟ ರಕ್ಷಣೆ, ನೀವು ಓದುತ್ತಿದ್ದೀರಿ ಎಂದರೆ ಸಂವಿಧಾನದ ಕೊಡುಗೆ. ನೀವು ಒಳ್ಳೆಯ ಪ್ರಜೆಗಳಾಗಬೇಕು, ಮೌಲ್ಯಗಳನ್ನ ಅಳವಡಿಸಿಕೊಳ್ಳಬೇಕು, ಬುದ್ದ, ಬಸವ, ಅಂಬೇಡ್ಕರ್ ಮೌಲ್ಯಗಳನ್ನ ಅಳವಡಿಸಿಕೊಳ್ಳಬೇಕು ಹಾಗ ಉತ್ತಮ ಪ್ರಜೆಗಳಾಗುತ್ತೀರ ಎಂದು ಹೇಳಿದರು.
ಬಸವ ಪರಂಪರೆಯಲ್ಲಿ ಅನ್ನದಾಸೋಹ, ಅಕ್ಷರ ದಾಸೋಹ ಬಂದಿದೆ. ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ಅದನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಈ ರೀತಿಯ ಪುಣ್ಯ ನಿಮಗೆ ಸಿಕ್ಕಿದೆ. ನಾನು ಕೋಲಾರ ಜಿಲ್ಲೆಯಿಂದ ಬಂದವನು, ಮಠ ಪರಂಪರೆ ಇರಲಿಲ್ಲ, ಎಲ್ಲೋ ಸೇರಿದಿವಿ, ಎಲ್ಲೋ ಓದಿದಿವಿ, ಇಲ್ಲಿಗೆ ಬಂದ ಮೇಲೆ ಅರ್ಥವಾಗಿದ್ದು ಬಸವಾದಿ ಶರಣರು ಹೇಗೆ ಇದ್ದರು, ಎಂತಹ ಕಷ್ಟಪಟ್ಟರು, ಸಾಮಾಜಿಕ ನ್ಯಾಯ ಉಳಿಸಿಕೊಳ್ಳಲಿಕ್ಕೆ ಎಂಬುವುದನ್ನು ಓದಿ, ತಿಳಿಯಲು ಆರಂಭವಾಯಿತು. ನಾನು ಇಲ್ಲಿ ನಿಂತು ಮಾತನ್ನಾಡುತ್ತಿದ್ದೇನೆ ಎಂದರೆ ಬುದ್ಧ, ಬಸವ, ಅಂಬೇಡ್ಕರ್ ಅದರಲ್ಲೂ ಅಂಬೇಡ್ಕರ್ ಕೊಟ್ಟ ಸಂವಿಧಾನ ಅಂತಾ ಹೇಳುತ್ತೇನೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಭೋವಿ ನಿಗಮದ ಮಾಜಿ ಅಧ್ಯಕ್ಷ ಸೀತಾರಾಮು, ಭೋವಿ ಗುರುಪೀಠದ ಸಿ.ಇ.ಓ ಗೌನಹಳ್ಳಿ ಗೋವಿಂದಪ್ಪ, ಎಸ್.ಜೆ.ಎಸ್ ಸಂಸ್ಥೆಯ ಕಾರ್ಯದರ್ಶಿ ಡಿ.ಸಿ.ಮೋಹನ್, ನಿರ್ದೇಶಕರಾದ ನೇರಲಗುಂಟೆ ರಾಮಪ್ಪ, ಕಾಳಘಟ್ಟ ಹನುಮಂತಪ್ಪ, ಕೆ.ರುದ್ರಪ್ಪ, ತಿಪ್ಪೇಸ್ವಾಮಿ, ಕೃಷ್ಣಮೂರ್ತಿ, ಆಂಜನೇಯ, ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಭಾಷಣದುದ್ದಕ್ಕೂ ಬಿಜೆಪಿ ಆರ್ ಎಸ್ ಎಸ್ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ
Next Article ಯೋಜನೆಗಳ ಫಲಾನುಭವಿ ಮಹಿಳೆಯರು ಸುಳ್ಳೋತ್ಪಾದಕರ ಮುಖಕ್ಕೆ ಉತ್ತರ ಕೊಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ
D Kumaraswamy
  • Tumblr

Related Posts

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026

ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

January 6, 2026

ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

December 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.