ಚಿತ್ರದುರ್ಗ: ರಾಜ್ಯ ಸರ್ಕಾರವು ಭದ್ರ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡಿ ಹಣ ಬಿಡುಗಡೆ ಮಾಡುವಂತೆ ಸಂಸದ ನಾರಾಯಣಸ್ವಾಮಿ ಮನವಿ ಮಾಡಿದ್ದಾರೆ.
ಸಂಸದ ಎ.ನಾರಾಯಣಸ್ವಾಮಿ
ದೆಹಲಿಯಲ್ಲಿ ಕೇಂದ್ರ ಜಲಶಕ್ತಿಯ ಚೇರ್ಮನ್ ರನ್ನು ಭೇಟಿ ಮಾಡಿ ಪ್ರಸ್ತುತ ಭದ್ರ ಮೇಲ್ದಂಡೆ ಅನಿವಾರ್ಯತೆಯನ್ನು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟು, ಕಾಮಗಾರಿಯ ಪ್ರಗತಿಯನ್ನು ವಿವರಿಸಿದ್ದಾರೆ. ಅಲ್ಲದೆ ಶೀಘ್ರವಾಗಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಬ್ನಾಗಿ ಮಾಡುವಂತೆ ಮಂಡಿಸಿರುವ ಕಡತವನ್ನು ಯತಾವತ್ತಾಗಿ ಅನುಮೋದಿಸಬೇಕು. ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.ಈ ಸಂದರ್ಭದಲ್ಲಿ ಕೇಂದ್ರ ಜಲಶಕ್ತಿಯ ಚೇರ್ಮನ್ ರಾಜೇಂದ್ರ ಕುಮಾರ್ ಜೈನ್,ಜಲಶಕ್ತಿಯ ಮಂಡಳಿಯ ಹಿರಿಯ ಅಧಿಕಾರಿಗಳು ವಿಶೇಷ ಸಭೆಯಲ್ಲಿ ಉಪಸ್ಥಿತರಿದ್ದರು.
ಸಂಯುಕ್ತವಾಣಿ