ಚಿತ್ರದುರ್ಗ : ಹೊಸದುರ್ಗ ತಾಲೂಕಿನ ಬೆಲಗೂರಿನ ಬಿಂದು ಮಾಧವ ಶರ್ಮಾ ಸ್ವಾಮೀಜಿ (75) ಇಹಲೋಕ ತ್ಯಜಿಸಿದ್ದಾರೆ.
ಬೆಲಗೂರು ಗ್ರಾಮದ ಶ್ರೀ ಆಂಜನೇಯ ದೇಗುಲದ ಅವಧೂತ ಬಿಂದು ಮಾಧವ ಶರ್ಮಾ ಎಂದೇ ಪ್ರಸಿದ್ಧರಾಗಿದ್ದರು. ಇಂದು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅನೇಕ ದೇವಸ್ಥಾನಗಳನ್ನು ಕಟ್ಟುವ ಮೂಲಕ ಜನಮನ ಗಳಿಸಿದ್ದರು. ಕಳೆದ 2 ವರ್ಷಗಳಿಂದ ಆರೋಗ್ಯದಲ್ಲಿ ಏರು ಪೇರಾಗುತ್ತಿತ್ತು. 20 ದಿನಗಳ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿದ್ದು, ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಇಂದು ಬೆಳಗಿನ ಸಮಯದಲ್ಲಿ ಹೃದಯಾಘಾತಕ್ಕೀಡಾಗಿ ಕೊನೆಯುಸಿರೆಳೆದಿದ್ದಾರೆ.ವಿವಿಧ ಮಠಾಧೀಶರು, ರಾಜಕೀಯ ನಾಯಕರುಗಳು ಮೃತರ ರಿಂದ ಮೃತರ ಆತ್ಮಕ್ಕೆ ಸಂತಾಪ ಸೂಚಿಸಿದ್ದಾರೆ. ಬೆಲಗೂರಿನ ಜಮೀನಿನಲ್ಲಿ ಇಂದೇ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಂಯುಕ್ತವಾಣಿ