ಚಿತ್ರದುರ್ಗ,(ಸಂವಾ)-ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ವಿಷಯಕ್ಕೆ ಪ್ರತಿಕ್ರಿಯಿಸುತ್ತಾ, ಬಿವೈ ವಿಜಯೇಂದ್ರ,ನಳೀನ್ ಕುಮಾರ್ ಕಟೀಲ್ ಕೋವಿಡ್ ಸಮಯದಲ್ಲಿ ಮೂರು ರಾಜ್ಯಗಳ ಪ್ರವಾಸ ಮಾಡಿದ್ದಾರೆ. ಅಧ್ಯಕ್ಷ ಸ್ಥಾನ ಬದಲಾವಣೆ ಪ್ರಶ್ನೆ ಉದ್ಭವವಾಗಿಲ್ಲ ಎಂದರು.
ಮುರುಘಾ ಮಠದಲ್ಲಿ ಇಂದು ಶರಣ ಸೇನೆ ಉದ್ಘಾಟನೆ ಮಾಡಿ ಮಾತನಾಡುತ್ತಾ, ಇನ್ನು ಶಿವಮೊಗ್ಗದಲ್ಲಿ ಕೈ ಪಡೆ ಚಳುವಳಿ ಮಾಡುತ್ತಿದ್ದು, ಕಾಂಗ್ರೆಸ್ ದೇಶದಲ್ಲಿ ಅಸ್ತಿತ್ವ ಕಳೆದುಕೊಂಡಂತೆ ರಾಜ್ಯ ದಲ್ಲಿಯೂ ಕಳೆದುಕೊಳ್ಳುತ್ತಿದೆ. ಭದ್ರಾವತಿಯಲ್ಲಿ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದ್ದು, ತಪ್ಪಾ? ಘೋಷಣೆ ಕೂಗಿದ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡಿ ಆಕ್ಷೇತ್ರದ ಶಾಸಕರ ನೇತೃತ್ವದಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದೆ. ಅದಕ್ಕೆ ಬೆಂಬಲ ನೀಡುವ ಮೂಲಕ ಅಸ್ತಿತ್ವ ಹುಡುಕಲು ಹೊರಟಿದೆ. ಬಿಜೆಪಿ ಪಕ್ಷದ ಕಾರ್ಯಕರ್ತರು ನಮ್ಮ ಪಕ್ಷ ದೃಢವಾಗಿದೆ. ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದು, ಕಾಂಗ್ರೆಸ್ ಪಕ್ಷ ಗೂಂಡಾಗಿರಿ ಮಾಡಲು ಬಿಜೆಪಿ ಅವಕಾಶ ನೀಡಲ್ಲ ಎಂದರು. ಸಿಡಿರಾಮ ಬಾಂಬೆ ರಾಮ. ಎಂಬ ರಮೇಶ್ ಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ವಿಜಯೇಂದ್ರ ಎಲುಬಿಲ್ಲದ ನಾಲಿಗೆ ಏನು ಬೇಕಾದರೂ ಮಾತನಾಡುತ್ತದೆ ಇದಕ್ಕೆಲ್ಲಾ ರಾಜ್ಯದ ಜನತೆ ಉತ್ತರ ಕೊಡುತ್ತಾರೆ ಎಂದು ಹೇಳಿದರು.
ಸಂಯುಕ್ತವಾಣಿ