Chitradurga pakshabeda maretu development work madi

ನಾಳೆ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಸೈಕಲ್ ಜಾಥ

ಜಿಲ್ಲಾ ಸುದ್ದಿ

ಚಿತ್ರದುರ್ಗ- ನಮಗೆ ಅಧಿಕಾರ ಕೊಟ್ಟರೆ ದೇಶದ ಚಿತ್ರಣವನ್ನೇ ಬದಲಾಯಿಸುತ್ತೇವೆ ಎಂದು ಸುಳ್ಳು ಭಾಷಣದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಇಂಧನ ಸೇರಿದಂತೆ ಅಗತ್ಯ ವಸ್ತುಗಳನ್ನು ಗಗನಕ್ಕೆ ಏರಿಸುವ ಮೂಲಕ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ಇದರ ವಿರುದ್ಧ ಹೊಳಲ್ಕೆರೆ ನಗರದಲ್ಲಿ ಜುಲೈ .17 ರಂದು ಶನಿವಾರ ಮಧ್ಯಾಹ್ನ 2.30 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೊಳಲ್ಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಹೇಳಿದ್ದಾರೆ.

 

 

 

Chitradurga cycle jatha

ಪಟ್ಟಣದ ಕುಕ್ಕುವಾಡೇಶ್ವರಿ ದೇವಸ್ಥಾನದ ಬಳಿ ಮಾಜಿ ಸಚಿವ ಹೆಚ್.ಆಂಜನೇಯ ಅವರ ನೇತೃತ್ವದಲ್ಲಿ ನಾಳೆ 17 ರಂದು ಮಧ್ಯಾಹ್ನ ಸೈಕಲ್ ಜಾಥಾ ಆರಂಭವಾಗಲಿದೆ. ಪಾದಯಾತ್ರೆಯಲ್ಲಿ ಕೆಪಿಸಿಸಿ ವೀಕ್ಷಕ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಮಾಜಿ ಸಚಿವ ನಜೀರ್ ಅಹ್ಮದ್, ಮೋಹನ್‌ಬಾಬು, ನಾಗರಾಜ್ ಭಾಗವಹಿಸಲಿದ್ದಾರೆ.ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕರುಗಳಾದ ಎ.ವಿ.ಉಮಾಪತಿ, ಬಿ.ಜಿ.ಗೋವಿಂದಪ್ಪ, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ ಎಂ.ಕೆ.ತಾಜ್‌ಪೀರ್, ಕಾರ್ಯಾಧ್ಯಕ್ಷ ಹಾಲಸ್ವಾಮಿ ಇತರ ಮುಖಂಡರು ಭಾಗವಹಿಸಲಿದ್ದಾರೆ.ಸೈಕಲ್ ಜಾಥಾ ಹಾಗೂ ಪಾದಯಾತ್ರೆಯೂ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಒಂಟಿಕಂಬದ ಆವರಣ ತಲುಪಲಿದ್ದು, ಅಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಪ್ರಮುಖ ಮುಖಂಡರು ಮಾತನಾಡಲಿದ್ದಾರೆ.ಜನವಿರೋಧಿ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರು, ವಿವಿಧ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಭಾರತೀಯ ಜನತಾಪಕ್ಷದ ದುರಾಡಳಿತವನ್ನು ಖಂಡಿಸಿ, ಜನರ ಹಿತ ಕಾಪಾಡಬೇಕೆಂದು ಹನುಮಂತಪ್ಪ ಮನವಿ ಮಾಡಿದ್ದಾರೆ.
ಸಂಯುಕ್ತವಾಣಿ

Leave a Reply

Your email address will not be published. Required fields are marked *