ಎಚ್. ಆಂಜನೇಯ ಅವರ ಬಳಿ ಧರ್ಮೇಗೌಡ ಈ ವಿಷಯ ಹಂಚಿಕೊಂಡಿದ್ದರು

ಜಿಲ್ಲಾ ಸುದ್ದಿ

ಚಿತ್ರದುರ್ಗ: ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡರು ಸರಳ ಸಜ್ಜನಿಕೆ ವ್ಯಕ್ತಿತ್ವವುಳ್ಳವರಾಗಿದ್ದರು. ಅವರು ಹೀಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಅಂದುಕೊಂಡಿರಲಿಲ್ಲ. ಅವರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಲಿ ಎಂದು ಸಮಾಜ ಕಲ್ಯಾಣ ಮಾಜಿ ಸಚಿವ. ಎಚ್. ಆಂಜನೇಯ ಸಂತಾಪ ವ್ಯಕ್ತಪಡಿಸಿದ್ದಾರೆ.

Chitradurga h. Aanjeya condolences

 

 

 

ಧರ್ಮೇಗೌಡರು
ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯುವ ಎಲ್ಲಾ ಲಕ್ಷಣಗಳಿದ್ದವು. ಕಳೆದ ಆರು ತಿಂಗಳ ಹಿಂದೆ ನನ್ನ ಬಳಿ‌ ದೂರವಾಣಿಯಲ್ಲಿ ಮಾತನಾಡಿ ಚಿಕ್ಕ ಮಗಳೂರಿನಲ್ಲಿ ಸರಿಯಾದ ಅಭ್ಯರ್ಥಿ ಕಾಂಗ್ರೆಸ್ ಗೆ ಇಲ್ಲವಾಗಿದೆ. ಮುಂದಿನ ಚುನಾವಣೆಯಲ್ಲಿ‌ ನನಗೆ ಕಾಂಗ್ರೆಸ್ ನಿಂದ ಟಿಕೇಟ್ ಸಿಗುವುದಾರೆ ನಾನು ಸಿಟಿ ರವಿ ವಿರುದ್ಧ ಸ್ಪರ್ಧಿಸುತ್ತೇನೆ ಎಂಬ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದರು. ಆದರೆ ಅದ್ಯಾಕೆ ಹೀಗೆ ಆತ್ಮಹತ್ಯೆ ಮಾಡಿಕೊಂಡರೋ ತಿಳಿದಿಲ್ಲ. ಇದರ ಬಗ್ಗೆ ಸರಿಯಾದ ತನಿಖೆಯಾಗಬೇಕು. ಏನೇ ಆಗಲಿ ಅವರ ಆತ್ಮಕ್ಕೆ ದೇವರು ಶಾಂತಿಯನ್ನು ನೀಡಲಿ ಅವರ ಕುಟುಂಬ ವರ್ಗದವರಿಗೆ ದುಖಃ ಭರಿಸುವ ಶಕ್ತಿ ನೀಡಲಿ
ಎಂದು ಸಮಾಜ ಕಲ್ಯಾಣ ಮಾಜಿ ಸಚಿವ ಎಚ್. ಆಂಜನೇಯ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಯುಕ್ತವಾಣಿ

Leave a Reply

Your email address will not be published. Required fields are marked *