ನಳೀನ್ ಕುಮಾರ್ ಕಟೀಲ್ ಗೆ ಬಹಿರಂಗ ಚರ್ಚೆಗೆ ಆಹ್ವಾನಿಸಿದ ಡಿಕೆಶಿ
ಚಿತ್ರದುರ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ.
ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ ಪೆಟ್ರೋಲ್& ಡಿಸೇಲ್ ಏರಿಕೆ ವಿರುದ್ದ ಕಾಂಗ್ರೆಸ್ ಪಕ್ಷ ಸೈಕಲ್ ಜಾಥ ಹಾಗೂ ಪ್ರತಿಭಟನೆ ಮಾಡಿದ್ದೇವೆ. ಬಿಜೆಪಿ ಸರ್ಕಾರ ಬಂಡುಬಿದ್ದು ಹೋಗಿದೆ ಎಂದು ಹೇಳಿದರು. ನಾಳೆ ಬೆಂಗಳೂರು ಹಿರಿಯ ನಾಯಕರ ಸಭೆ ಕರೆದಿದ್ದು, ರಾಷ್ಟ್ರ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ಇನ್ನು ಸಿದ್ದರಾಮಯ್ಯ ಕುರಿತು ಕಟೀಲ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ
ಕಾಂಗ್ರೇಸ್ ಮ್ಯೂಜಿಕಲ್ ಚೇರ್ ಆಡುತ್ತಿದ್ದೇವೋ, ಯಾವ ಚೇರ್ ಆಡುತ್ತಿದ್ದೇವೋ ಆದರೆ ಬಿಜೆಪಿಯಲ್ಲಿ ನಡೆಯುತ್ತಿರುವ ಆಟಕ್ಕೆ ಏನು ಹೆಸರು ಇಟ್ಟಿದ್ದೀರಾ ? ಎಂದು ಪ್ರಶ್ನೆ ಮಾಡಿದರು. ಸಿದ್ದರಾಮಯ್ಯ ಕೊಟ್ಟ ಮಾತು ಯಾವತ್ತು ತಪ್ಪಿಲ್ಲ. ಸಿದ್ದರಾಮಯ್ಯ ಅಧಿಕಾರ ಅವಧಿಯಲ್ಲಿ ಚುನಾವಣಾ ಪ್ರಣಾಳಿಕೆ ನುಡಿದಂತೆ ನಡೆದಿದ್ದು, ಸಿದ್ದು ಬಸವಣ್ಣ ಜನ್ಮದಿನಾಚರಣಯೆಂದು ಪ್ರಮಾಣ ವಚನ ಸ್ವೀಕರಿಸಿ, ಜನರಿಗೆ ಹೇಳಿದ 95% ಜನರಿಗೆ ಭರವಸೆ ಪೂರೈಸಿದ್ದಾರೆ. ನಳೀನ್ ಕುಮಾರ್ ಹೇಳಿಕೆ ಕುರಿತು ಬಹಿರಂಗ ಚರ್ಚೆಗೆ ಬರಲಿ ಮಾಧ್ಯಮದವರು ಏರ್ಪಾಡು ಮಾಡಿ ಕುಳಿತು ಈ ಕುರಿತು ಚರ್ಚೆ ಮಾಡೋಣ ಎನ್ನುವ ಮೂಲಕ
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಬಹಿರಂಗ ಚರ್ಚೆಗೆ ಡಿಕೆ ಶಿವಕುಮಾರ್ ಆಹ್ವಾನ ನೀಡಿದರು. ಚಿತ್ರದುರ್ಗ ಜಿಲ್ಲೆಯಿಂದ ತೆರಳಿ ದಾವಣಗೆರೆಯ ಹೊನ್ನಾಳಿ ತಾಲೂಕಿನ ಬಂಜಾರ ಸಮೂದಾಯದ ಸೇವಲಾಲ್ ಗುರುಗಳ ಕ್ಷೇತ್ರವಾಗಿರುವ ಸುರಗೊಂಡನಕೊಪ್ಪಕ್ಕೆ ಭೇಟಿ ನೀಡಲಿರುವ ಡಿ.ಕೆ ಶಿವಕುಮಾರ್, ತಾಂಡ ನಿವಾಸಿಗಳ ನಿರುದ್ಯೋಗ, ಕೊರೊನಾ ಸಂಕಷ್ಟದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಬಳಿಕ ಶಿಕಾರಿಪುರದ ಬೆಂಡೆಕಟ್ಟೆ, ಮರಡಿ ಹಾಗೂ ಶಿವಮೊಗ್ಗದ ಕುಂಚೇನಹಳ್ಳಿ ತಾಂಡಾಕ್ಕೆ ಡಿ.ಕೆ ಶಿವಕುಮಾರ್ ಭೇಟಿ ನೀಡಲಿದ್ದಾರೆ. ತಮ್ಮ ಬಳಿ ಮುಕ್ತವಾಗಿ ಸಮಸ್ಯೆ ಹೇಳಿಕೊಳ್ಳುವಂತೆ ಡಿ.ಕೆ ಶಿವಕುಮಾರ್ ಈಗಾಗಲೇ ತಾಂಡ ನಿವಾಸಿಗಳ ಬಳಿ ಮನವಿ ಮಾಡಿಕೊಂಡಿದ್ದಾರೆ.
ಸಂಯುಕ್ತವಾಣಿ