ಚಿತ್ರದುರ್ಗ, ಜಿಲ್ಲೆಯಲ್ಲಿ ರೆಮಿಡಿಸಿವರ್ ಇಂಜೆಕ್ಷನ್ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದಿದ್ದು, ಇದಕ್ಕಾಗಿ ಫ್ಲೈಯಿಂಗ್ ಸ್ಕ್ವಾಡ್ ನೇಮಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಹೇಳಿದರು.
ಕೋವಿಡ್ ಸೋಂಕಿತರಿಗೆ ಚಿಕಿತ್ಸೆಯ ಸಮಯದಲ್ಲಿ ಜೀವ ರಕ್ಷಕವಾಗಿರುವ ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದಕ್ಕಾಗಿ ಪತ್ತೆ ಹಚ್ಚುವ ಸಲುವಾಗಿ ಫ್ಲೈಯಿಂಗ್ ಸ್ಕ್ವಾಡ್ ನೇಮಿಸಲಾಗುತ್ತಿದೆ. ಹಾಗೆಯೆ ಬಸವೇಶ್ವರ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ ಒಂದು ದಿನಕ್ಕೆ 10 ಸಾವಿರ ಬಿಲ್ ಮಾಡಲಾಗುತ್ತಿದೆ. ಇದು ಹೆಚ್ಚಾಗಿದ್ದು, ನೀವು ಎಸ್ಓಪಿ ಮಾರ್ಗ ಸೂಚಿಯನ್ನು ಉಲ್ಲಂಘಿಸುತ್ತಿದ್ದೀರಿ ಇದು ಸರಿಯಲ್ಲ ಕಡಿಮೆ ಮಾಡಿಕೊಳ್ಳಬೇಕು ಎಂದು ಬಸವೇಶ್ವರ ಆಸ್ಪತ್ರೆಯ ಸೂಪರಿಟೆಂಡಂಟ್ ಫಾಲಾಕ್ಷಪ್ಪ ಅವರಿಗೆ ಏರು ಧ್ವನಿಯಲ್ಲಿ ಸಚಿವ ಶ್ರೀರಾಮುಲು ಮಾತನಾಡಿದರು. ಸರ್ಕಾರಿ ಮಾರ್ಗ ಸೂಚಿ ಅನುಸರಿಸಬೇಕು ಎಂದು ಸೂಚಿಸಿದರು. ಇದರ ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಪಾಲಾಕ್ಷ ಅವರಿಗೆ ನಿವೇನು ಮಾಡುತ್ತಿದ್ದಿರಿ ಎಂದು ತರಾಟೆಗೆ ತೆಗೆದುಕೊಂಡರು.
ಸಂಯುಕ್ತವಾಣಿ