ಚಿತ್ರದುರ್ಗ: ಚಳ್ಳಕೆರೆ ಕ್ಷೇತ್ರದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ ಅಭ್ಯರ್ಥಿ ಗಳು ನಿರಾಸರಾಗಬೇಡಿ.ಸೋಲೆ ಗೆಲುವಿನ ಮೆಟ್ಟಿಲು ಎಂದು ಶಾಸಕ ಟಿ.ರಘುಮೂರ್ತಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಲ್ಲಿ ಧೈರ್ಯ ತುಂಬಿದ್ದಾರೆ.
ತಾಲೂಕಿನಲ್ಲಿರುವ ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರು ಪಕ್ಷಭೇದ ಮರೆತು ಚುನಾವಣೆಯ ಸಂದರ್ಭದಲ್ಲಿ ನಡೆದಿರಬಹುದಾದ ಕಹಿಘಟನೆಗಳನ್ನು ಲೆಕ್ಕಿಸದೆ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಚುನಾವಣೆ ಬಂದಾಗ ಮಾತ್ರ ಪಕ್ಷ ಚುನಾವಣೆ ಮುಗಿ ಪಕ್ಷಬೇದ ಮರೆತು ಅಭಿವೃದ್ದಿಗೆ ಸಹಕಾರಮಾಡಬೇಕು.
ಗ್ರಾಮಗಳಲ್ಲಿ ಎಲ್ಲಾ ಸಮುದಾಯವನ್ನು ಗಣನೆಗೆ ತೆಗೆದುಕೊಳ್ಳಬೇಕು, ಬಡವರಿಗೆ, ಬಲ್ಲಿದರಿಗೆ. ಸಹಕಾರ ಮಾಡಿ ,ಗ್ರಾಮಗಳ ಸ್ವಚ್ಚತೆ, ಕುಡಿಯುವ ನೀರು.ಶಾಲೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಸಮಾಜ ಒಳತಿಗಾಗಿ ಸಹಕರಿಸಿ.
ತಾಲ್ಲೂಕಿನ ಬಹಳಷ್ಟು ಗ್ರಾಮ ಪಂಚಾಯತಿಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ ವಿಶೇಷವಾಗಿ ನನ್ನ ಮತ ಕ್ಷೇತ್ರದ ಗ್ರಾಮ ಪಂಚಾಯತಿಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೆ ಗೆದ್ದಿರುವುದು ನನ್ನ ಅಧಿಕಾರದ ಅವಧಿಯಲ್ಲಿ ಮಾಡಿದ ಸಾಧನೆ, ನಾನು ಸಹ ಚುನಾವಣೆ ಸಂದರ್ಭದಲ್ಲಿ ಮಾತ್ರ ಪಕ್ಷ ಅಂತ ಹೋಗುತ್ತೆನೆ .ನಂತರ ನನ್ನ ಗುರಿ ಅಭಿವೃದ್ಧಿಯೊಂದೆ ಹಾಗೆ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿ ಕಡೆಗೆ ಮತದಾರರು ಒಲವನ್ನು ತೋರಿಸಿದ್ದಾರೆ ಮತ ನೀಡಿದ. ಮತದಾರರಿಗೆ ಕೃತಜ್ಞತೆಗಳು.
ಜಯಗಳಿಸಿದ ಅಭ್ಯರ್ಥಿಗಳಿಗೆ ಅಭಿನಂದನೆ.ಗ್ರಾಮಗಳು ರಾಮರಾಜ್ಯ ವಾಗಬೇಕೆಂಬ ಗಾಂಧೀಜಿಯವರ ಕನಸನ್ನು ನನಸು ಮಾಡಿದವರು
ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಅಧಿಕಾರ ಸಮಾನವಾಗಿ ಹಂಚಿಕೆಯಾಗಬೇಕು ಇದು ಸಾಮಾಜಿಕ ನ್ಯಾಯ. ಜನರ ಕೈಗೆ ಅಧಿಕಾರ ನೀಡಿದ ಕೀರ್ತಿ ಕಾಂಗ್ರೆಸ್ ಪಾರ್ಟಿಗೆ ಸಲ್ಲಬೇಕು ಎಂದು ಹೇಳಿದ್ದಾರೆ.
ಸಂಯುಕ್ತವಾಣಿ