ಬೆಂಗಳೂರು: ವಿವಿಧ ಬೇಡಿಕೆಗಳ ಜೊತೆಗೆ ಸಾರಿಗೆ ನೌಕರರನ್ನು ಸರ್ಕಾರಿನೌಕರರೆಂದು ಪರಿಗಣಿಸಬೇಕು ಎಂಬ ಬೇಡಿಕೆ ಇಟ್ಟುಕೊಂಡು ನಡೆಸುತ್ತಿರುವ ನೌಕರರ ತಕ್ಷಣದ ಬೇಡಿಕೆಗಳನ್ನು ಕೂಡಲೇ ಮಾತುಕತೆ ಮೂಲಕ ಈಡೇರಿಸಬೇಕು ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಕಳೆದೆರಡು ದಿನಗಳಿಂದ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದಾದ್ಯಂತ ಸಾರಿಗೆ ನೌಕರರು ಬಸ್ ನಿಲ್ಲಿಸಿ ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆ ಎದುರಾಗಿದೆ. ಸಮಸ್ಯೆ ಪರಿಹಾರವಾಗಬೇಕು. ಇದರಿಂದ ಸರ್ಕಾರ ಮುಷ್ಕರ ನಿರತ ನೌಕರರ ಮುಖಂಡರನ್ನು ಕರೆದು ಸಮಸ್ಯೆ ಬಗೆಹರಿಸಬೇಕು. ಹಾಗೂ ತಕ್ಷಣಕ್ಕೆ ಈಡೇರಿಸಬಹುದಾದ ಬೇಡಿಕೆಗಳನ್ನು ಈಡೇರಿಸಿ ನಂತರ ಕುಳಿತು ಮಾತಾಡಿ ಸಮಸ್ಯೆಗಳನ್ನು ಬಹರಿಸುವಂತೆ ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಸಂಯುಕ್ತವಾಣಿ