ಬೆಂಗಳೂರು: ಚಾಮರಾಜನಗರದಲ್ಲಿ 24 ಜನರು ಆಕ್ಸಿಜನ್ ಇಲ್ಲದೆ ಸಾವನ್ನಪ್ಪಿದ್ದು, ಇದು ಸರ್ಕಾರ ನಡೆಸಿರೋ ಕೊಲೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು.
ಕೋರೋನಾ ಸೋಂಕಿತರಿಗೆ ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆಯಾಗಿಲ್ಲ. ಇದರಿಂದ ನರಳಿ ಸುಮಾರು 24 ಜನರು ಮೃತಪಟ್ಟಿದ್ದಾರೆ. ಮೃತ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ನೀಡಬೇಕು ಇದಕ್ಕೆ ಸರ್ಕಾರ ಸಿಎಂ ಹಾಗೂ ಆರೋಗ್ಯ ಸಚಿವರು ಮತ್ತು ಅಧಿಕಾರಿಗಳೇ ನೇರ ಹೊಣೆಯಾಗಿದ್ದಾರೆ. ಅವರು ಕೂಡಲೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು.24 ಜನರ ಬೆಲೆನೇ ಇಲ್ವ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು. ಅಧಿಕಾರಿಗಳ ನಿರ್ಲಕ್ಷತನವೇ ಕಾರಣವಾಗಿದೆ. ಇದು ಸರ್ಕಾರಿ ಅಧಿಕಾರಿಗಳಿಂದ ತನಿಖೆಯಾಗುವ ಬದಲು ನ್ಯಾಯಾಂಗ ತನಿಖೆ ಯಾಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಸಂಯುಕ್ತವಾಣಿ