ಚಿತ್ರದುರ್ಗ:ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಚಿತ್ರದುರ್ಗ ನಗರದಲ್ಲಿ ರೈತರು ಹಾಗೂ ವಿವಿಧ ಸಂಘಟನೆಗಳು ತಲೆ ಮೇಲೆ ಬಂಡೆಗಳನ್ನು ಹೊತ್ತು ಬಾಯಿ ಬಡಿದುಕೊಂಡು ಪ್ರತಿಭಟಿಸಿದರೆ, ಹಿರಿಯೂರು ತಾಲೂಕಿನಲ್ಲಿ ಕರವೇ ಕಾರ್ಯಕರ್ತರು ( ಪ್ರವೀಣ್ ಶೆಟ್ಟಿ ಬಣ) ನೆಹರು ಮೈದಾನದಿಂದ ತಹಶೀಲ್ದಾರ್ ಕಚೇರಿವರೆಗೂ ರೈತರ ಜೊತೆಗೂಡಿ ಸರ್ಕಾರದ ವಿರುದ್ದ ಘೋಷಣೆ ಹಾಕಿಕೊಂಡು ಪ್ರತಿಭಟನಾ ಮೆರವಣಿಗೆ ನಡೆಸಿದವು.
ತಹಶೀಲ್ದಾರ್ ಕಚೇರಿಗೆ ತಲುಪಿ ಮನವಿಯನ್ನು ನೀಡಿ ಪ್ರತಿಭಟನೆಯನ್ನು ಅಂತ್ಯಗೊಳಿಸಿದವು.
ಹೊಳಲ್ಕೆರೆ ಪಟ್ಟಣದಲ್ಲಿ ಕೂಡ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ರೈತ ವಿರೋಧಿ ಕಾಯ್ದೆ ಖಂಡಿಸಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಘೋಷಣೆ ಹಾಕಿದವು.
ಸಂಯುಕ್ತವಾಣಿ