ಚಿತ್ರದುರ್ಗ: ಲಾರಿಗಳ ನಡುವೆ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ ಚಾಲಕರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೆಳಗಿನ ಜಾವದ ಸಮಯದಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹಾಲುಮಾದೇನಹಳ್ಳಿ ಗೇಟ್ ಬಳಿ ಹುಳಿಯಾರ್ ನಿಂದ ಬರುತ್ತಿದ್ದ ಲಾರಿ TN37-DY 6115,ಹಾಗೂ ಹಿರಿಯೂರು ಕಡೆಯಿಂದ ಹೋಗುತ್ತಿದ್ದ ಲಾರಿ KA06-B 2669 ಎರಡು ಪರಸ್ಪರ ಡಿಕ್ಕಿ ಹೊಡೆದು ಇಬ್ಬರು ಚಾಲಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಆದರೆ ಅವರ ಹೆಸರುಗಳು ಪತ್ತೆಯಾಗಿಲ್ಲ. ಹಿರಿಯೂರು ಗ್ರಾಮಾಂತರ ಠಾಣೆಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಘಟನೆಯನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಸಂಯುಕ್ತವಾಣಿ