ಚಿತ್ರದುರ್ಗ:ಕೋಟೆ ನಾಡು ಚಿತ್ರದುರ್ಗದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಆರಂಭಿಸುವುದಕ್ಕೆ ಬೇಕಾಗುವ ಖರ್ಚು ವೆಚ್ಚದ ಬಗ್ಗೆ ಪ್ರಸ್ತಾವಾನೆ ಸಲ್ಲಿಸಲು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
ದೇಶದಾದ್ಯಂತ ಕೋರೋನಾ ಎರಡನೇ ಅಲೆ ಆರ್ಭಟ ಹೆಚ್ಚಾಗುತ್ತಿದ್ದು, ಈಗಾಗಲೇ ದೇಶದಾದ್ಯಂತ ಆಕ್ಸಿಜನ್ ಕೊರತೆಯಾಗುತ್ತಿದೆ. ಇದರಿಂದ ಸಾವುಗಳು ಹೆಚ್ಚಾಗುತ್ತಿವೆ. ಇದನ್ನು ಅರಿತ ಕೋಟೆ ನಾಡಿನಲ್ಲಿ ಮುಂದಿನ ದಿನಗಳಲ್ಲಿ ಆಕ್ಸಿಜನ್ ಕೊರತೆಯಾಗದಂತೆ ಮಾಡಲು ಜಿಲ್ಲಾ ಕೇಂದ್ರ ಸೇರಿದಂತೆ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಆಕ್ಸಿಜನ್ ತಯಾರಿಕಾ ಘಟಕಗಳನ್ನು ಆರಂಭಿಸಲು ಚಿಂತಿಸಲಾಗಿದ್ದು, ಅದಕ್ಕೆ ತಗುಲುವ ವೆಚ್ಚದ ಬಗ್ಗೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಸೂಚಿಸಿದರು.
ಸಂಯುಕ್ತವಾಣಿ