ಹೃದಯಾಘಾತದಿಂದ ಪೋಲಿಸ್ ಪ್ರಶಿಕ್ಷಣಾರ್ಥಿ ಸಾವು.
ಚಿತ್ರದುರ್ಗ : ಪೋಲಿಸ್ ಪ್ರಶಿಕ್ಷಣಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
- ಶರಣಪ್ಪ ಸಣ್ಣಗೌಡ (27) ಮೃತ ಪ್ರಶಿಕ್ಷಣಾರ್ಥಿ. ಬೆಂಗಳೂರು ನಗರದಲ್ಲಿ ಹೊಸದಾಗಿ ನೇಮಕಾತಿ ಹೊಂದಿದ್ದ 431 ಪೋಲಿಸ್ ಪ್ರಶಿಕ್ಷಣಾರ್ಥಿಗಳು ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಪೋಲಿಸ್ ತರಬೇತಿ ಕೇಂದ್ರದಲ್ಲಿ ಕಳೆದ ನಾಲ್ಕು ತಿಂಗಳಿಂದ ತರಬೇತಿ ಪಡೆಯುತ್ತಿದ್ದರು. ಶರಣಪ್ಪ ಸಣ್ಣ ಗೌಡ ಮೂಲತಃ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮದ್ದೂರು ಗ್ರಾಮದರು. ಪೋಲಿಸ್ ತರಬೇತಿ ಪ್ರಶಿಕ್ಷಣಾರ್ಥಿ ನಿನ್ನೆ ಸಂಜೆ 70.30 ರ ಸಮಯದಲ್ಲಿ ತನ್ನ ಕೊಠಡಿಯಲ್ಲಿ ಪೋನ್ ನಲ್ಲಿ ಮಾತನಾಡುತ್ತಿರುವಾಗ ಆಕಸ್ಮಿಕವಾಗಿ ಕುಸ್ತು ಬಿದ್ದು ಅಸ್ವಸ್ಥರಾಗಿದ್ದು ತಕ್ಷಣ ಅವರನ್ನು ಚಿತ್ರದುರ್ಗ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಐಮಂಗಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸಂಯುಕ್ತ ವಾಣಿ