ಚಿತ್ರದುರ್ಗ: ಪೆಟ್ರೋಲ್ ,ಡಿಸೇಲ್ ಅಡುಗೆ ಅನಿಲ ರಸಗೊಬ್ಬರ ಹಾಗೂ ವಿದ್ಯುತ್ ದರ ಏರಿಕೆ ಮಾಡಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಇದೇ 25 ರಂದು ಜೆಡಿಎಸ್ ಪ್ರತಿಭಟನೆಯನ್ನು ನಡೆಸಲಿದೆ ಎಂದು ಜಿಲ್ಲಾಧ್ಯಕ್ಷ ಡಿ. ಯಶೋಧರ ತಿಳಿಸಿದ್ದಾರೆ.
ಕೋರೋನಾ ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸಲು ವಿಧಿಸಲಾದ ಲಾಕ್ ಡೌನ್ ನಿಂದ ಜನ ಸಮಾನ್ಯರು ಹೈರಾಣಾಗಿದ್ದಾರೆ. ಈ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಜೀವನದ ಜೊತೆ ಚಲ್ಲಾಟವಾಡುತ್ತಿವೆ. ಇದು ಶ್ರೀ ಸಾಮಾನ್ಯನ ಮೇಲೆ ಗದಾ ಪ್ರಹಾರ ಮಾಡಿದಂತಾಗಿದ್ದು, ಇದರಿಂದ ಜನ ಸಮಾನ್ಯರು ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದಾರೆ. ಬೆಲೆ ಏರಿಕೆಯನ್ನು ಕಡಿಮೆ ಮಾಡುವಂತೆ ಒತ್ತಾಯಿಸಿ ಜೆಡಿಎಸ್ ಪ್ರತಿಭಟನೆ ನಡೆಸಲಿದೆ
ಸಂಯುಕ್ತವಾಣಿ
ಸುದ್ದಿ ಮತ್ತು ಜಾಹೀರಾತಿಗಾಗಿ ಸಂರ್ಪಕಿಸಿ
8660924503