ಚಿತ್ರದುರ್ಗ, ಬರದ ನಾಡು ಕೋಟೆ ನಾಡು ಚಿತ್ರದುರ್ಗ ಜಿಲ್ಲೆಗೆ ಬೇಸಿಗೆ ಬಂತು ಎಂದರೆ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತದೆ. ಜನ ಜಾನುವಾರುಗಳಿಗೆ ಎಲ್ಲಿಲ್ಲದ ಸಮಸ್ಯೆಗಳು ಎದುರಾಗುತ್ತದೆ. ಇದರಿಂದ ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಶ್ರೀರಾಮುಲು ಸಿಎಂ ಯಡಿಯೂರಪ್ಪ ಅವರಿಗೆ ಪತ್ರವನ್ನು ಬರೆದು ನೀರು ಹರಿಸುವಂತೆ ಮನವಿ ಮಾಡಿದ್ದಾರೆ.
ಹಿರಿಯೂರಿನ ವೇದಾವತಿ ಜಲಾಶಯದಿಂದ ಮೊಳಕಾಲ್ಮೂರು ಕ್ಷೇತ್ರದ ನದಿ ತಟಗಳಲ್ಲಿ ಹಾಗು ಗ್ರಾಮಗಳ ನೀರಿನ ಮೂಲಗಳಿಗೆ ನೀರು ಹರಿಸಬೇಕು. ಇದರಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಪತ್ರವನ್ನು ಮುಖ್ಯ ಮಂತ್ರಿ ಯಡಿಯೂರಪ್ಪ ಅವರಿಗೆ ಬರೆಯುವ ಮೂಲಕ ಮನವಿ ಮಾಡಿದ್ದಾರೆ.
ಸಂಯುಕ್ತ ವಾಣಿ