ಅಸಮಧಾನ ಹೊರಹಾಕಿದ ತಿಪ್ಪಾರೆಡ್ಡಿ

ಆರೋಗ್ಯ

ಚಿತ್ರದುರ್ಗ: ಮಂತ್ರಿ ಸ್ಥಾನ ನೀಡುವಲ್ಲಿ ಜಿಲ್ಲೆಗೆ ನ್ಯಾಯ ಸಿಕ್ಕಿಲ್ಲ ಎಂದು ಬಿಜೆಪಿ ಹಿರಿಯ ಶಾಸಕ ಜಿ. ಹೆಚ್. ತಿಪ್ಪಾರೆಡ್ಡಿ ಅಸಮಾಧಾನ ಹೊರ ಹಾಕಿದ್ದಾರೆ.

Chitradurga thippareddy asamadhana

 

 

 

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಚಿತ್ರದುರ್ಗ ಜಿಲ್ಲೆಗೆ ಅನ್ಯಾಯವಾಗುತ್ತಲೆ ಇದೆ. ಹೊರಗಿನವರು ಬಂದು ಮಂತ್ರಿಯಾಗುತ್ತಾರೆ. ಇದರಿಂದ ಜಿಲ್ಲೆಯ ಅಭಿವೃದ್ದಿಗೆ ಕುಂಠಿತವಾಗುತ್ತದೆ. ಅಪ್ಪರ್ ಭದ್ರಾ ಹಾಗೂ ರೈಲ್ವೇ ಮಾರ್ಗ ಇನ್ನಿತರೇ ಕಾಮಗಾರಿಗಳು ವಿಳಂಬವಾಗುತ್ತಿವೆ. ಇದರಿಂದ ಸ್ಥಳಿಯರಿಗೆ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿ ಐವರು ಶಾಸಕರು ಆಯ್ಕೆಯಾಗಿದ್ದೇವೆ. ನಾನು ಐದು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಪಕ್ಷದಲ್ಲಿ ಹಿರಿಯರಿಗೆ ಗೌರವ ಸಿಗುತ್ತದೆ ಅಂದುಕೊಂಡಿದ್ದೆನೆ. ಹೀಗಾಗಿಯೇ ನಾನು ಹೈ ಕಮಾಂಡ್ ಭೇಟಿ ಮಾಡಿಲ್ಲ. ನನ್ನನ್ನು ಇದುವರೆಗೂ ಯಾರೂ ಸಂಪರ್ಕ ಮಾಡಿಲ್ಲ. ಮುಖ್ಯ ಮಂತ್ರಿಗಳು ನನಗೆ ಅವಕಾಶ ಮಾಡಿಕೊಡುತ್ತಾರೆ ಎಂಬ ನಂಬಿಕೆ ನನಗಿದೆ. ನಾನು ಯಾವುದೇ ಲಾಭಿ ಮಾಡಿಲ್ಲ ಹೈ ಕಮಾಂಡ್ ಭೇಟಿ ಮಾಡಿಲ್ಲ ಎಂದು ತಿಪ್ಪಾರೆಡ್ಡಿ ಹೇಳಿದರು.

ಸಂಯುಕ್ತವಾಣಿ

Leave a Reply

Your email address will not be published. Required fields are marked *