Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಸಿಎಂ ಪೌರ ಕಾರ್ಮಿಕರ ಬೇಡಿಕೆ ಈಡೇರಿಸಲಿ: ಮಾಜಿ ಶಾಸಕ‌ ಜಿ‌ಹೆಚ್ ತಿಪ್ಪಾರೆಡ್ಡಿ
ರಾಜ್ಯ

ಸಿಎಂ ಪೌರ ಕಾರ್ಮಿಕರ ಬೇಡಿಕೆ ಈಡೇರಿಸಲಿ: ಮಾಜಿ ಶಾಸಕ‌ ಜಿ‌ಹೆಚ್ ತಿಪ್ಪಾರೆಡ್ಡಿ

D KumaraswamyBy D KumaraswamyMay 30, 2025No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ ಮೇ.30: ಜಿಲ್ಲಾ ಪೌರಕಾರ್ಮಿಕರ ಸಂಘದ ದಿಂದ ನಗರಸಭೆಯ ಮುಂದೆ ಕಳೆದ ೨೭ ರಿಂದ ನಡೆಸುತ್ತಿರುವ, ಅನಿರ್ಧಿಷ್ಟ ಮುಷ್ಕರ ಸ್ಥಳಕ್ಕೆ ಇಂದು ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಭೇಟಿ ನೀಡಿದರು. ಬೇಡಿಕೆಗಳನ್ನು ಆಲಿಸಿದ ಮಾಜಿ‌ ಶಾಸಕರು ಮಾತಾಡಿ,ನಾವು ವಿರೋಧಪಕ್ಷದಲ್ಲಿದ್ದೇವೆ. ವಿಧಾನಸಭೆಯಲ್ಲಿ ಮಾತಾಡಿ ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಗಳನ್ನು ಒತ್ತಾಯಿಸುವಂತೆ ಹೇಳುತ್ತೇನೆಂದು ಭರವಸೆ ನೀಡಿದರು. ರಾಜ್ಯದಲ್ಲಿರುವ ಎಲ್ಲಾ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು ಸಾಕಷ್ಟು ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಆದರೂ ಕೂಡ ಸರ್ಕಾರ ನಿಮ್ಮಗಳತ್ತ ಗಮನಹರಿಸದೆ ನಿರ್ಲಕ್ಷ್ಯ ತೋರುತ್ತಿದೆ. ಕೋವಿಡ್ ಸಮಯದಲ್ಲಿ  ಪೌರ ಕಾರ್ಮಿಕರು ಯಾರು ಮಾಡದ ಕೆಲಸವನ್ನು ಮಾಡಿದ್ದಾರೆ. ಮಾರಕ ರೋಗದ ಜೊತೆ  ಕೆಲಸವನ್ನು ಮಾಡಿದ್ದಾರೆ. ಈ ಕೆಲಸವನ್ನು ಬೇರೆ ಯಾರು ಮಾಡಲ್ಲ, ಇವರಿಗೆ ಇವರೇ ಸಾಟಿ. ಇಂತಹರಿಗೆ ಸರ್ಕಾರ ಉತ್ತಮ ಸೌಕರ್ಯ ನೀಡಬೇಕಿದೆ. ಸರ್ಕಾರ  ಬೇರೆ ನೌಕರರಿಗಿಂತ ಇವರಿಗೆ ಹೆಚ್ಚಿನ ಅದ್ಯತೆ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು. ಸುಮಾರು ೨೫-೩೦ ವರ್ಷಗಳಿಂದ ಹೊರಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿರುವ ವಾಹನ ಚಾಲಕರು, ನೀರು ಸರಬರಾಜು ಸಿಬ್ಬಂದಿಗಳು, ಲೋಡರ್ಸ್, ಗುತ್ತಿಗೆ ಲೆಕ್ಕಿಗರು, ಕ್ಲೀನರ್ ಪೌರಕಾರ್ಮಿಕರು, ಸೂಪರ್ ವೈಸರ್ಸ್, ಕಂಪ್ಯೂಟರ್ ಆಪರೇಟರ್‌ಗಳು, ಜ್ಯೂನಿಯರ್ ಪ್ರೋಗ್ರಾಸ್ ಸಿಬ್ಬಂದಿಗಳನ್ನು ಖಾಯಂ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದು, ಕೆ.ಜಿ.ಐ.ಡಿ., ಜಿ.ಪಿ.ಎಫ್., ಜ್ಯೋತಿ ಸಂಜೀವಿನಿ, ಸೇರಿದಂತೆ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯವನ್ನು ಪೌರ ನೌಕರರಿಗೂ ಜಾರಿ ಮಾಡಬೇಕು. ೨೦೨೨-೨೩ನೇ ಸಾಲಿನಲ್ಲಿ ಪೌರಕಾರ್ಮಿಕರ ವಿಶೇಷ ನೇಮಕಾತಿಯಡಿ ಪೌರಕಾರ್ಮಿಕರು ನೇಮಕಾತಿ ಹೊಂದಿದ್ದು, ನೌಕರರಿಗೆ ಸರ್ಕಾರವು ನಗರ ಸ್ಥಳೀಯ ಸಂಸ್ಥೆ ನಿಧಿಯಿಂದ ವೇತನ ಪಡೆಯಲು ಆದೇಶಿಸಲಾಗಿದ್ದನ್ನು ರದ್ದುಪಡಿಸಿ, ಎಸ್.ಎಫ್.ಸಿ ಅನುದಾನದಡಿ ವೇತನ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.ಈಗ ನಾನು ಆಧಿಕಾರದಲ್ಲಿ ಇಲ್ಲ ಅಲ್ಲದೆ ನಮ್ಮ ಪಕ್ಷವೂ ಸಹಾ ಅಧಿಕಾರವನ್ನು ನಡೆಸುತ್ತಿಲ್ಲ.  ನಿಮ್ಮ ಪರವಾಗಿ ನಾನು ಯಾವಾಗಲೂ ಇದ್ದೇನೆ ನನ್ನ ಅಧಿಕಾರದ ಅವಧಿಯಲ್ಲಿ ಹಲವಾರು ಪೌರ ಕಾರ್ಮಿಕರನ್ನು ಕೆಲಸಕ್ಕೆ ಸೇರಿಸಿದ್ದೇ, ಅವರಿಗೆ ಮನೆಗಳನ್ನು ಸಹಾ ನೀಡಿದ್ದೇ ಎಂದು ಸ್ಮರಿಸಿಕೊಂಡರು. ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಶ್ರೀನಿವಾಸ್, ಹರೀಶ್, ದೀಪು, ಮಾಜಿ ಸದಸ್ಯರಾದ ಕೃಷ್ಣಮೂರ್ತಿ, ರವಿಶಂಕರ್, ಪೌರಕಾರ್ಮಿಕರ ಸಂಘದ ಸಿ.ರೇಣುಕಾ, ಎಸ್.ಪಿ.ಲವ, ಪುಟ್ಟಸ್ವಾಮಿ, ಸೇರಿದಂತೆ ಪೌರಕಾರ್ಮಿಕರು ಭಾಗವಹಿಸಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಜಾತಿಗಣತಿ ಸಮೀಕ್ಷೆ ವಿಸ್ತರಣೆ ಅಗತ್ಯ ನಾ.ನಾಗಮೋಹನ್ ದಾಸ್ ಆಯೋಗಕ್ಕೆ ಪತ್ರ ಪಾದಯಾತ್ರೆ ವೇಳೆ ಮಾಜಿ ಸಚಿವ ಹೆಚ್.ಆಂಜನೇಯ ಹೇಳಿಕೆ
Next Article ಸಮುದಾಯದ ಹಿತಾಸಕ್ತಿಗೆ ಧಕ್ಕೆ ಬಂದರೆ ಸುಮ್ಮನಿರಲ್ಲ: ಡಾ.ಪ್ರಸನ್ನಾನಂದಪುರಿ ಮಹಾಸ್ವಾಮೀಜಿ ಗುಡುಗು
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.