- ಸಿಎಂ ಬದಲಾವಣೆ ಖಚಿತ I ma very confident
ಮೈಸೂರು,(ನ04)- ಉಪಚುನಾಣೆ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಮಾಧ್ಯಮಗಳ ಜೊತ ಮಾತನಾಡುತ್ತಾ, ಅವರು ಬಿಜೆಪಿಯಲ್ಲಿ ಸಿಎಂ ಬದಲಾವಣೆ ಮಾಡುತ್ತಾರೆ. ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯಲ್ಲ. I am very confident ಯಡಿಯೂರಪ್ಪ ಬದಲಾಗ್ತಾರೆ ಎಂದು ಹೇಳಿದರು. ನನಗೆ ದೆಹಲಿಯಿಂದ ಬಂದಿರುವ ಮಾಹಿತಿ ಆಧಾರದ ಮೇಲೆ ಈ ಮಾತನ್ನು ಹೇಳುತ್ತೆನೆ. ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು, ಅದೊಂದು ಕಾರಣ ಇರಬಹುದು. ಹಲವು ದಿನದಿಂದ ಸಿಎಂ ಬದಲಾವಣೆ ಮಾಡುವ ಚಿಂತನೆಯಲ್ಲಿ ಬಿಜೆಪಿ ಇದೆ. ಹಾಗಾಗಿ ಉಪ ಚುನಾವಣೆ ಫಲಿತಾಂಶದ ನಂತರ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಹೇಳಿದ್ದಾರೆ.