ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಮೇಲೆ ಮಡಿಕೇರಿಯಲ್ಲಿ ಮೊಟ್ಟೆ ಎಸೆದು ಅವಮಾನ ಮಾಡಿರುವುದನ್ನು ಕಾಂಗ್ರೆಸ್ ಸಹಿಸಿಕೊಂಡಿರುವುದಿಲ್ಲ. ಸರಿಯಾದ ಸಮಯಕ್ಕೆ ತಕ್ಕ ಉತ್ತರ ನೀಡಲಾಗುವುದು ಎಂದು
ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹೇಳಿದರು. ಅವರು ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತನಾಡಿದರು.
2013 ರಿಂದ 18 ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಬಡವರಿಗೆ ಮಹಾತ್ವಾಕಾಂಕ್ಷಿ ಯೋಜನೆಗಳನ್ನು ನೀಡಿ ಭಾಗ್ಯಗಳ ಸರದಾರ ಎಂದೆನಿಸಿಕೊಂಡಿರುವುದು ಬಿಜೆಪಿ.ಯವರಿಗೆ ಅಸೂಯೆಯಾಗಿರುವುದರಿಂದ ಇಂತಹ ಕೃತ್ಯಗಳನ್ನು ಎಸಗುತ್ತಿದ್ದಾರೆ. ಕಾಂಗ್ರೆಸ್ ಹುಟ್ಟಿದ್ದು, ಅಧಿಕಾರಕ್ಕಾಗಿ ಅಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಎನ್ನುವುದನ್ನು ಕೋಮುವಾದಿ ಬಿಜೆಪಿ.ಯವರು ಮೊದಲು ಅರ್ಥಮಾಡಿಕೊಳ್ಳಲಿ. ಕೋಮು ವಿಷಬೀಜ ಬಿತ್ತಿ ಜನರ ಗಮನ ಬೇರೆಡೆ ಸೆಳೆಯಲು ಈ ರೀತಿಯ ನೀಚ ಕೃತ್ಯಕ್ಕೆ ಮುಂದಾಗಿದ್ದಾರೆ. ತಪ್ಪಿತಸ್ಥರ ವಿರುದ್ದ ರಾಜ್ಯದ ಮುಖ್ಯಮಂತ್ರಿ ಕ್ರಮ ಜರುಗಿಸಲಿ ಎಂದು ಆಗ್ರಹಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಹನುಮಲಿ ಷಣ್ಮುಖಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರುಗಳಾದ ಬಿ.ಯೋಗೇಶ್ಬಾಬು, ಆರ್.ನರಸಿಂಹರಾಜ, ಕೃಷ್ಣಮೂರ್ತಿ, ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ನೇರ್ಲಗುಂಟೆ ರಾಮಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಬಿ.ಟಿ.ಜಗದೀಶ್, ಡಿ.ಎನ್.ಮೈಲಾರಪ್ಪ, ವಿಧಾನಪರಿಷತ್ ಮಾಜಿ ಸದಸ್ಯೆ ಜಯಮ್ಮ ಬಾಲರಾಜ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತ ನಂದಿನಿಗೌಡ, ಮನಿರಾ ಎ.ಮಕಾಂದಾರ್, ನಜ್ಮತಾಜ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರೆಹಳ್ಳಿ ಉಲ್ಲಾಸ್, ಲಿಡ್ಕರ್ ಮಾಜಿ ಚೇರ್ಮನ್ ಓ.ಶಂಕರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ಜಿ.ಪಂ.ಮಾಜಿ ಉಪಾಧ್ಯಕ್ಷ ಗಂಗಾಧರ್, ಸೈಯದ್ ಖುದ್ದೂಸ್, ಮೋಹನ್ ಪೂಜಾರಿ, ಎಸ್.ಎನ್.ರವಿಕುಮಾರ್ ಸೇರಿದಂತೆ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪ್ರತಿಭಟನೆಯಲ್ಲಿದ್ದರು.