Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಸಂವಿಧಾನ ಉಳಿವಿಗಾಗಿ ನಡೆಯುತ್ತಿರುವ ‌ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿ
ರಾಜ್ಯ

ಸಂವಿಧಾನ ಉಳಿವಿಗಾಗಿ ನಡೆಯುತ್ತಿರುವ ‌ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿ

D KumaraswamyBy D KumaraswamyApril 13, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

2024ರ ಚಿತ್ರದುರ್ಗ ಲೋಕಸಭಾ ಚುನಾವಣೆ ಪ್ರಯುಕ್ತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಕಾರ್ಯದರ್ಶಿಗಳು ಹಾಗೂ ರಾಜ್ಯ ವಕ್ಫ್ ಪರಿಷತ್ ಸದಸ್ಯ ಅಬ್ದುಲ್ ಘನೀ ತಾಹಿರ್ ನೇತೃತ್ವದಲ್ಲಿ ಅಲ್ಪಸಂಖ್ಯಾತ ವಿಭಾಗದ ಸಭೆ ನಡೆಸಲಾಯಿತು.
ಸಭೆಯಲ್ಲಿ ಮಾತಾಡಿದ, ಅಬ್ದುಲ್ ಘನೀ ತಾಹಿರ್ ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳು ತಮ್ಮ ವಾರ್ಡ್ ಮತ್ತು ಹಳ್ಳಿಯಲ್ಲಿ ಅತಿ ಹೆಚ್ಚು ಮತಗಳನ್ನು ಹಾಕಿಸುವ ಜವಾಬ್ದಾರಿ ತಮ್ಮ ಮೇಲಿದೆ. ಎಲ್ಲಾ ಅಲ್ಪಸಂಖ್ಯಾತ ಮತದಾರರನ್ನು ಭೇಟಿ ಮಾಡಿ,ಎಲ್ಲರೂ ತಪ್ಪದೇ ಮತ ಚಲಾಯಿಸುವಂತೆ ಜಾಗೃತಿ ಮೂಡಿಸಬೇಕು. ಎಲ್ಲರೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿ, ನಮ್ಮ ಅಭ್ಯರ್ಥಿ ಗೆಲ್ಲಿಸುವಲ್ಲಿ ನಿರಂತರವಾಗಿ ಶ್ರಮಿಸಬೇಕು. ಈ ಚುನಾವಣೆ ನಮ್ಮ ದೇಶದ ಬಡವರ ರಕ್ಷಣೆ ಮತ್ತು ಸಂವಿಧಾನದ ಉಳಿಗಾಗಿ ನಡೆಯುತ್ತಿರುವ ಚುನಾವಣೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಹಲವು ಗ್ಯಾರಂಟಿ ನೀಡುವುದಾಗಿ ಪ್ರಕಟಿಸಿದೆ. ಆದ್ದರಿಂದ ತಾವುಗಳು ಮನೆಮನೆಗೆ ಗ್ಯಾರಂಟಿಗಳ ಬಗ್ಗೆ ಜಾಗೃತಿ ಮೂಡಿಸಿ, ಹೆಚ್ಚಿನ ಮತ ಪಡೆಯಲು ಶ್ರಮಿಸಬೇಕು ಎಂದರು.
ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷ ಸೈಯದ್ ಖುದ್ದುಸ್, ಮಾತಾಡಿ ಮುಂಬರುವ ಲೋಕಸಭಾ ಚುನಾವಣೆ ಚಿತ್ರದುರ್ಗದ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಪರವಾಗಿ ಮತಯಾಚಿಸಲು ಇದೇ ತಿಂಗಳ ದಿನಾಂಕ 15 ರ ಸೋಮವಾರ ಸಂಜೆ ನಾಲ್ಕು ಗಂಟೆಗೆ ಚಿತ್ರದುರ್ಗ ನಗರದ ಉಮಾಪತಿ ಕಲ್ಯಾಣ ಮಂಟಪಕ್ಕೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ವಸತಿ ಸಚಿವರಾದ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಆಗಮಿಸುತ್ತಿದ್ದು, ನಮ್ಮ ಅಲ್ಪಸಂಖ್ಯಾತ ವಿಭಾಗದ ಎಲ್ಲಾ ಪದಾಧಿಕಾರಿಗಳು ಮುಖಂಡರು ಎಲ್ಲರೂ ಅತಿ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.ಚಿತ್ರದುರ್ಗ ನಗರ ಅಧ್ಯಕ್ಷ ಡಾ. ರಾಮತುಲ್ಲಾ, ಶಿಕ್ಷಕರ ಮತ್ತು ಪದವೀಧರರ ವಿಭಾಗದ ಜಿಲ್ಲಾಧ್ಯಕ್ಷ ಮುದಾಸಿರ್ ನವಾಜ್, ಉಬೆದುಲ್ಲಾ, ಚಾಂದ್ ಪೀರ್, ರಹಮತ್, ಅಕ್ಬರ್ ಭಾಷಾ, ರಾಜು ಕೀಮ್ಚಂದ್ ಜೈನ್, ಅರುಣ್ ಫ್ರಾನ್ಸಿಸ್ ಡಿಸೋಜಾ, ಕಮ್ಮು, ಶರೀಫ್, ಜಬಿ ಉಲ್ಲಾ, ನಿಜಾಮ್ ಮತ್ತಿತರರು ಉಪಸ್ಥಿತರಿದ್ದರು.

 

 

 

 

Share. Facebook Twitter Pinterest LinkedIn Tumblr WhatsApp Email
Previous Articleಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಸಂವಿಧಾನ ಉಳಿಯುತ್ತದೆ: ಸಚಿವ ಮುನಿಯಪ್ಪ
Next Article ನಿಮ್ಮ ಪ್ರಧಾನಿ ಅಭ್ಯರ್ಥಿ ಯಾರು ಹೆಸರು ಹೇಳಿ ನೋಡೋಣಾ: ಬಿಎಸ್ ವೈ ವ್ಯಂಗ್ಯ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.