ತಾಲೂಕಿನ ಸಮಗ್ರ ಅಭಿವೃದ್ಧಿಗೆ ರೂ.2000 ಕೋಟಿ ಅನುದಾನ

ಜಿಲ್ಲಾ ಸುದ್ದಿ

ತಾಲೂಕಿನ ಸಮಗ್ರ ಅಭಿವೃದ್ಧಿಗೆ ರೂ.2000 ಕೋಟಿ ಅನುದಾನ
ಉತ್ತಮ ಆಡಳಿತವೇ ಸರ್ಕಾರದ ಜನೋತ್ಸವ ಕಾರ್ಯಕ್ರಮ
-ಸಚಿವ ಶ್ರೀರಾಮುಲು
ಮೊಳಕಾಲ್ಮೂರು ತಾಲೂಕಿನ ಅಭಿವೃದ್ಧಿಗೆ ರೂ. 2000 ಕೋಟಿಗಳ ಅನುದಾನ ಒದಗಿಸಲಾಗಿದೆ. ಅಭಿವೃದ್ಧಿ ಕಾರ್ಯಗಳನ್ನು ಮಾಡುವುದು ಜನರ ಒಳಿತಿಗಾಗಿ. ಜನರನ್ನು ಸೇರಿಸಿ ಉತ್ಸವ ಮಾಡುವುದು ಸರ್ಕಾರದ ಕೆಲಸವಲ್ಲ. ಉತ್ತಮ ಆಡಳಿತವೇ ಸರ್ಕಾರದ ಜನೋತ್ಸವ ಕಾರ್ಯಕ್ರಮವಾಗಿದೆ ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.

 

 

 

 


ಮೊಳಕಾಲ್ಮೂರು ಪಟ್ಟಣದಲ್ಲಿ ಬುಧವಾರ ನೂತನ ತಾಲೂಕು ಆಡಳಿತ ಸೌಧದ ಲೋಕಾರ್ಪಣೆ ಹಾಗೂ ರೂ.70 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಚಾಲನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರೂ.11 ಕೋಟಿ ವೆಚ್ಚದಲ್ಲಿ ನೂತನ ತಾಲೂಕು ಆಡಳಿತ ಸೌಧ, ರೂ.1.30 ಕೋಟಿ ವೆಚ್ಚದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ರೂ.35 ಲಕ್ಷ ವೆಚ್ಚದ ಪಶು ಸಂಗೋಪನೆ ಆಸ್ಪತ್ರೆ, ರೂ.1.36ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ, ಕೊತ್ತಲಗುಂದ ಕೆರೆಯಿಂದ ಮೊಳಕಾಲ್ಮೂರು ನಗರಕ್ಕೆ ಕುಡಿಯುವ ನೀರು ಸರಬರಾಜು, ಮೊಳಕಾಲ್ಮೂರು ನಗರದ ಮಾರುತಿ ನಗರದ ಓವರ್ ಹೆಡ್ ಟ್ಯಾಂಕರ್ ನಿರ್ಮಾಣ, ಶಾಸಕರ ಅನುದಾನದಲ್ಲಿ ಪತ್ರಕರ್ತರ ಭವನ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಈ ಭಾಗದ ಕುಡಿಯುವ ನೀರು ಸಮಸ್ಯೆ ಕೊನೆಗಾಣಿಸುವ ರೂ.614 ಕೋಟಿ ವೆಚ್ಚದ ತುಂಗಭದ್ರಾ ಹಿನ್ನೀರಿನ ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಜಲಜೀವನ್ ಮಿಷನ್ ಅಡಿ ರೂ. 52 ಕೋಟಿ ವೆಚ್ಚದಲ್ಲಿ 128 ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ರೂ.30 ಕೋಟಿ ವೆಚ್ಚದಲ್ಲಿ ಬೀದರ್ ಹಾಗೂ ಶ್ರೀರಂಗಪಟ್ಟಣ ಹೆದ್ದಾರಿ ಸಂಪರ್ಕಿಸುವ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕಿನ 70 ಮಹಿಳಾ ಸಂಘಗಳಿಗೆ ರೂ.1 ಲಕ್ಷಗಳ ಬೀಜಧನದ ಚಕ್, ಸ್ಮಾಶನಕ್ಕಾಗಿ ಜಾಗ ನೀಡಿದವರಿಗೆ ಪರಿಹಾರ ಧನದ ಚಕ್, ಸಂಧ್ಯಾ ಸುರಕ್ಷಾ ಹಾಗೂ ವಿಕಲಚೇತನ ಮಾಸಾಶನದ ಆದೇಶ ಹಾಗೂ ರೈತರಿಗೆ ಹಕ್ಕು ಪತ್ರಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ .ಎಸ್.ಮನ್ನಿಕೇರಿ, ಪಟ್ಟಣ ಪಂಚಾಯತಿ ಅಧ್ಯಕ್ಷ ಲಕ್ಷ್ಮಣ್, ಉಪಾಧ್ಯಕ್ಷೆ ಸುಭಾ ಪೃಥ್ವಿರಾಜ್, ರಾಜ್ಯ ಅನುಸೂಚಿತ ಜಾತಿ, ಪಂಗಡಗಳ ಆಯೋಗದ ಸದಸ್ಯ ಜಯಪಾಲ, ಉಪ ವಿಭಾಗಧಿಕಾರಿ ಆರ್.ಚಂದ್ರಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್ ರೆಡ್ಡಿ ಸೇರಿದಂತೆ ಪಟ್ಟಣ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *