ಕಾರು ಅಪಘಾತದಲ್ಲಿ ನಿವೃತ್ತ ಡಿವೈಎಸ್ಪಿ ಸೇರಿದಂತೆ ಪತ್ನಿಯೂ ಸ್ಥಳದಲ್ಲೇ ಸಾವು.
ಚಿತ್ರದುರ್ಗ : ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ರಭಸಕ್ಕೆ ನಿವೃತ್ತ ಡಿವೈಎಸ್ಪಿ ಸೇರಿದಂತೆ ಕಾರಿನಲ್ಲಿದ್ದ ಅವರ ಪತ್ನಿಯೂ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗವೂ ಸಂಪೂರ್ಣ ನುಜ್ಜುಗಜ್ಜಾಗಿ ಹೋಗಿದೆ. ಈ ಘಟನೆಯೂ ತಾಲೂಕಿನ ಭರಮಸಾಗರದ ಕೊಳಾಳು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ಸಂಭವಿಸಿದ್ದು, ಮೃತರನ್ನು
ಅಬಕಾರಿ ಇಲಾಖೆಯ ನಿವೃತ್ತ ಡಿವೈಎಸ್ಪಿ ಜಯರಾಂ ನಾಯ್ಕ್ ಮತ್ತು ಹೇಮಲತಾ ಜಯರಾಂನಾಯ್ಕ್ ಎಂದು ಗುರುತಿಸಲಾಗಿದೆ.
ಇವರು ದಾವಣಗೆರೆಯ ಆಂಜನೇಯ ಬಡಾವಣೆಯ ನಿವಾಸಿಗಳಾಗಿದ್ದಾರೆ. ಇವರು ಬೆಂಗಳೂರು ಕಡೆಯಿಂದ ದಾವಣಗೆರೆಗೆ ತೆರಳುವಾಗ ಕಾರು ಚಾಲಕನ ಅಜಾಗರೂಕತೆಯಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಭರಮಸಾಗರ ಪೋಲಿಸ್ ಠಾಣಾ ವ್ಯಾಪ್ತಿಯ ಪ್ರಕರಣ ನಡೆದಿದೆ.