Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಗಾಂಧಿ ಕೊಂದ ದುಷ್ಟನ ವೈಭವೀಕರಣದ ವಿಕೃತ: ಆಂಜನೇಯ ಕಳವಳ
ಜಿಲ್ಲಾ ಸುದ್ದಿ

ಗಾಂಧಿ ಕೊಂದ ದುಷ್ಟನ ವೈಭವೀಕರಣದ ವಿಕೃತ: ಆಂಜನೇಯ ಕಳವಳ

D KumaraswamyBy D KumaraswamyOctober 2, 2022No Comments3 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

ಗಾಂಧಿ ಕೊಂದ ದುಷ್ಟನ ವೈಭವೀಕರಣದ ವಿಕೃತ

 

 

ಮಾಜಿ ಸಚಿವ ಎಚ್.ಆಂಜನೇಯ ಕಳವಳ

ಚಿತ್ರದುರ್ಗ. ಅ.2:  ಭಾರತ ದೇಶದ ಸ್ವಾತಂತ್ರ್ಯ ಹೋರಾಟದ ಹಾದಿಯಲ್ಲಿ ಲಕ್ಷಾಂತರ ಮಂದಿ ಬಲಿದಾನ ಮಾಡಿದ್ದು, ಅಂತಹ ಮಹನೀಯರ ಆಶಯಗಳಿಗೆ ಪ್ರಸ್ತುತ ಕಂಟಕ ಎದುರಾಗಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಕಳವಳ ವ್ಯಕ್ತಪಡಿಸಿದರು.
ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಪಕ್ಷ ಭಾನುವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚಣೆ ಉದ್ಘಾಟಿಸಿ ಮಾತನಾಡಿದರು.


ಬ್ರಿಟಿಷರ ಕಪಿಮುಷ್ಟಿಗೆ ಸಿಲುಕಿದ್ದ ಭಾರತವನ್ನು ಸ್ವತಂತ್ರ ದೇಶವನ್ನಾಗಿಸಲು ಮಹಾತ್ಮ ಗಾಂಧೀಜಿ  ನೇತೃತ್ವದಲ್ಲಿ ನಡೆದ ಅಹಿಂಸಾ ಚಳವಳಿ ಜಗತ್ತಿಗೆ ಮಾದರಿ ಆಗಿದೆ. ಶಸ್ತ್ರಾಸ್ತ್ರ ರಹಿತ, ಶಾಂತಿಯುತ ಹೋರಾಟದಲ್ಲಿ ದೇಶಕ್ಕೆ ಸ್ವತಂತ್ರ ತಂದು ಕೊಡುವಲ್ಲಿ ಗಾಂಧೀಜಿ ಸೇರಿದಂತೆ ಲಕ್ಷಾಂತರ ಜನರ ತ್ಯಾಗ ಬಲಿದಾನ ಇದೆ ಎಂದರು. ಸ್ವತಂತ್ರದ ಬಳಿಕ ದೇಶ ಎಲ್ಲ ಜಾತಿ, ಧರ್ಮದ ಜನ ಸೌಹಾರ್ಧ ಜೀವನ ನಡೆಸಬೇಕೆಂಬ ಆಶಯವನ್ನು ಮಹನೀಯರು ಹೊಂದಿದ್ದರು.‌ ಈ ಕಾರಣಕ್ಕೆ ಬಸವತತ್ವದ ಸಿದ್ಧಾಂತಡಿ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚಿಸಿದರು. ಆದರೆ, ಇಂದು ಮಹನೀಯರ ಆಶಯ ಹಾಗೂ ಸಂವಿಧಾನಕ್ಕೆ ಕಂಟಕ ಎದುರಾಗಿದೆ ಎಂದು ಆಂಜನೇಯ ಆತಂಕ ವ್ಯಕ್ತಪಡಿಸಿದರು.
ನೂರಾರು ವರ್ಷಗಳ ಕಾಲ ಆಂಗ್ಲರು ಸಂಪತ್ತನ್ನು ಕೊಳೆ ಹೊಡೆದಿದ್ದ ಪರಿಣಾಮ ಭಾರತ ಬರಿದಾಗಿತ್ತು. ದೇಶದಲ್ಲಿ ನಿರುದ್ಯೋಗ, ಹಸಿವು, ಕಾಲರಾ ತಾಂಡಾವವಾಡುತ್ತಿತ್ತು. ಇಂತಹ ಸಂದರ್ಭದಲ್ಲಿ ಗಾಂಧೀಜಿ ಆಶಯಕ್ಕೆ ಸಣ್ಣ ಧಕ್ಜೆ ಆಗದಂತೆ ಕಾಂಗ್ರೆಸ್ ಪಕ್ಷದ ನೆಹರು, ವಲ್ಲಭಭಾಯಿ ಪಟೇಲ್, ಲಾಲ್ ಬಹಾದ್ದೂರ್ ಶಾಸ್ತ್ರಿ ಸೇರಿದಂತೆ ದೇಶವನ್ನು ಆಳಿದ ಎಲ್ಲ ನಾಯಕರು ಭಾರತವನ್ನು ಕಟ್ಟುವಲ್ಲಿಪ್ರಾಮಾಣಿಕವಾಗಿ ಶ್ರಮಿಸಿದರು. ನೂರಾರು ಕೈಗಾರಿಕೆ, ಜಲಾಶಯ, ವಿಮಾನ ನಿಲ್ದಾಣ, ವಿದ್ಯುತ್ ಉತ್ಪಾದನಾ ಕೇಂದ್ರ, ವಿಶ್ವವಿದ್ಯಾಲಯ, ಶಿಕ್ಷಣ ಕೇಂದ್ರ ಸ್ಥಾಪಿಸಿದರು. ಹಸಿವು, ನಿರುದ್ಯೋಗ ಮುಕ್ತ ದೇಶ ಮಾಡುವಲ್ಲಿ ಅಧಿಕಾರ ನಡೆಸಿದರು ಎಂದರು. ರೈಲು ಅಪಘಾತದ ನೈತಿಕಹೊಣೆವೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶಾಸ್ತ್ರೀಜಿ, ನಿಧನರಾದ ಬಳಿಕ ಅವರ ಬ್ಯಾಂಕ್ ಖಾತೆಯಲ್ಲಿ ಹಣವೇ ಇರಲಿಲ್ಲ.‌ ಜೈ ಜವಾನ್ ಜೈ ಕಿಸಾನ್ ಘೋಷಣೆ ಇಂದಿಗೂ ಆದರ್ಶವಾಗಿ ಉಳಿದಿದೆ. ಗಾಂಧೀಜಿ, ಶಾಸ್ತ್ರಿಜಿ, ಅಂಬೇಡ್ಕರ್  ಆಶಯಗಳ ಅಡಿಯಲ್ಲಿ ದೇಶವನ್ನು ಆಳಿದ ಎಲ್ಲ ನಾಯಕರು ಆಡಳಿತ ನಡೆಸಿದ್ದಾರೆ.
ಆದರೆ, ಇತ್ತೀಚೆಗೆ ಎಂಟು ವರ್ಷಗಳಲ್ಲಿ ದೇಶವನ್ನು ಧರ್ಮ, ಜಾತಿ ಹೆಸರಲ್ಲಿ ವಿಭಜಿಸುವ ಕುತಂತ್ರ ಜೋರಾಗಿ ನಡೆಯುತ್ತಿದೆ. ದೇಶದ ಸಾರ್ವಜನಿಕ ಆಸ್ತಿಗಳನ್ನು ಬಂಡವಾಳಗಾರರಿಗೆ ಮಾರಾಟ ಮಾಡಲಾಗುತ್ತಿದೆ. ಈ ಮೂಲಕ ದೇಶದ ಯುವಕರನ್ನು ನಿರುದ್ಯೋಗಿಗಳನ್ನಾಗಿ ಮಾಡಲಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿಸಲಾಗಿದೆ, ಸಿಲಿಂಡರ್, ಬೇಳೆಕಾಳು ಬೆಲೆ ದುಬಾರಿ ಮಾಡಲಾಗಿದೆ. ಇದರಿಂದ ಆಕ್ರೋಶಗೊಂಡಿರುವ ಜನರ ಗಮನ ಬೇರೆ ಕಡೆ ಸೆಳೆಯಲು ಜಾತಿ, ಧರ್ಮದ ವಿಷ ಬೀಜವನ್ನು ಜನರ ಮನದಲ್ಲಿ ಬಿತ್ತಲಾಗುತ್ತಿದೆ ಎಂದು ಬೇಸರಿಸಿದರು.
ಬ್ರಿಟಿಷರ ಕಾಲದಲ್ಲಿ ಹೇಗೆ ಹಿಂದು-ಮುಸ್ಲಿಂ ಎಂದು ದೇಶವನ್ನು ಇಬ್ಭಾಗ ಮಾಡಲು ಯತ್ನಿಸಿದ್ದರೋ ಅದೇ ರೀತಿಯ ವ್ಯವಸ್ಥೆ ರಾಜಕಾರಣಕ್ಕಾಗಿ ದೇಶದಲ್ಲಿ ಮರುಕಳಿಸುತ್ತಿದೆ. ಗಾಂಧಿಯನ್ನು ಕೊಂದ ದೇಶದ್ರೋಹಿ ನಾತುರಾಮ್ ಗೂಡ್ಸೆಯನ್ನು ವೈಭವಿಕರಿಸುವ ಕುತಂತ್ರಿಗಳು, ದೇಶಭಕ್ತ ಮುಖವಾಡದಲ್ಲಿ ದೇಶದ ಮುಂಚೂಣಿಯಲ್ಲಿ ನಿಲ್ಲುತ್ತಿದ್ದಾರೆ. ಜನರ ಮನಸ್ಸು ಕಲುಷಿತಗೊಳಿಸುವ ದುಷ್ಕೃತ್ಯ ಎಲ್ಲೆಡೆ ನಡೆಯುತ್ತಿದ್ದು, ಭಾರತ ಮತ್ತೊಮ್ಮೆ ದುಷ್ಟರ ಕಪಿಮುಷ್ಟಿಗೆ ಸಿಲುಕುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ದೇಶವನ್ನು ಈ ವಿಷ ವರ್ತುಲದಿಂದ ಹೊರತರಲು, ಜಾತಿ, ಧರ್ಮದ ಹೆಸರಲ್ಲಿ ಇಬ್ಬಾಗ ಆಗದಂತೆ, ಕುತಂತ್ರಿಗಳ ಕೋಮುಭಾವನೆ ಭಾಷಣಕ್ಕೆ ಮರುಳಗಾದಂತೆ, ದೇಶದ ಜನರಲ್ಲಿ ನಾವೆಲ್ಲ ಭಾರತೀಯರು ಎಂಬ ಭಾವನೆ ಮೂಡಿಸಲು ಜಗತ್ತಿನಲ್ಲಿ ಈ ಶತಮಾನದಲ್ಲಿಯೇ ಐತಿಹಾಸಿಕ ಪಾದಯಾತ್ರೆಯನ್ನು ರಾಷ್ಟ್ರ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿದ್ದಾರೆ.
ಪಕ್ಷಾತೀತ ಯಾತ್ರೆಯಲ್ಲಿ ನಿರೀಕ್ಷೆಮೀರಿ ಜನರು ಪಾಲ್ಗೊಂಡು, ಭಾವಿ ಪ್ರಧಾನಿ ರಾಹುಲ್ ಗಾಂಧಿ ಬಳಿ ಜನ ತಮ್ಮ ಭಾವನೆ, ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳುತ್ತಿದ್ದಾರೆ. ಮತ್ತೊಂದು ಸ್ವಾತಂತ್ರ್ಯ ಚಳವಳಿ ರೂಪವನ್ನು ರಾಹುಲ್ ಕಾಲ್ನಡಿಗೆ ಯಾತ್ರೆಪಡೆದುಕೊಳ್ಳುತ್ತಿದ್ದು, ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದುಕೊಟ್ಟ ವಾರಸುದಾರರಲ್ಲಿ ನಡುಕ ಉಂಟಾಗಿದೆ ಎಂದು ಹೇಳಿದರು. ಜನ ಒಗ್ಗೂಡಿದರೆ ದುಷ್ಟರು ಎಷ್ಟೇ ಬಲಶಾಲಿ, ಕುತಂತ್ರಿಗಳಾಗಿದ್ದರು ಭಯಭೀತಿಗೊಳ್ಳುತ್ತಾರೆ ಎಂಬುದಕ್ಕೆ ಭಾರತ್ ಜೋಡೋ ಯಾತ್ರೆಯೇ ಉತ್ತಮ ಉದಾಹರಣೆ ಎಂದು ಆಂಜನೇಯ ಅಭಿಪ್ರಾಯಪಟ್ಟರು.
ಹೊಳಲ್ಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಟಿ.ಹನುಮಂತಪ್ಪ, ಭರಮಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದುರ್ಗೇಶ್ ಪೂಜಾರ್, ಭಾರತ್ ಜೋಡೋ ಯಾತ್ರೆ ಕೊ ಅರ್ಡಿನೆಟರ್ ದೊಡ್ಡರಂಗಪ್ಪ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಜರ್ ಉಲ್ಲಾ ಖಾನ್, ಜಿ.ಪಂ.ಮಾಜಿ ಉಪಾಧ್ಯಕ್ಷ ಬಿ.ಗಂಗಾಧರ್,ಮಾಜಿ ಸದಸ್ಯರಾದ ಎಸ್. ಜೆ.ರಂಗಸ್ವಾಮಿ, ಎಂ.ಜಿ.ಲೋಹಿತ್ ಕುಮಾರ್, ಪಟ್ಟಣ ಪಂಚಾಯಿತಿ ಸದಸ್ಯ ಕೇಶವ್ ಮೂರ್ತಿ, ಕೆಪಿಸಿಸಿ ಸಂಯೋಜಕ ಲೋಕೇಶ್ ನಾಯ್ಕ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು,ಪದಾಧಿಕಾರಿಗಳು,ಗ್ರಾಮ ಪಂಚಾಯಿತಿ ಮಾಜಿ ಮತ್ತು ಹಾಲಿ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಅಕ್ಟೋಬರ್ 7 ರಂದು ಇಡಿ ವಿಚಾರಣೆಗೆ ಹಾಜರಾಗುವುದಿಲ್ಲ: ಕೆಪಿಸಿಸಿ‌ ಅಧ್ಯಕ್ಷ ಡಿಕೆ‌ ಶಿವಕುಮಾರ್
Next Article ವಿವಾದಿತ ರಸ್ತೆ ಒತ್ತುವರಿ ತೆರವುಗೊಳಿಸಿದ ತಹಶೀಲ್ದಾರ್ ರಘುಮೂರ್ತಿ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.