Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜಕೀಯ»ಬಿಜೆಪಿ ಗೆ ನಿದ್ದೆಯಲ್ಲೂ ಸಿದ್ದರಾಮಯ್ಯ ಭೀತಿ‌
ರಾಜಕೀಯ

ಬಿಜೆಪಿ ಗೆ ನಿದ್ದೆಯಲ್ಲೂ ಸಿದ್ದರಾಮಯ್ಯ ಭೀತಿ‌

D KumaraswamyBy D KumaraswamyJuly 29, 2022No Comments4 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

ನಿದ್ದೆಯಲ್ಲೂ ಬಿಜೆಪಿಗರಿಗೆ ಸಿದ್ದರಾಮಯ್ಯ ಭೀತಿ

ಅಂದು ಬಳ್ಳಾರಿ ಪಾದಯಾತ್ರೆ, ಇಂದು ಜನ್ಮದಿನ ಅಮೃತ ಮಹೋತ್ಸವ

ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

ಪ್ರತಿ ವ್ಯಕ್ತಿಯ ಜೀವನದಲ್ಲಿ 50, 60, 75, 100ನೇ ವರ್ಷದ ಜನ್ಮದಿನ ಸಂಭ್ರಮದ ವಿಷಯ. ಈ ನೆಲೆಗಟ್ಟಿನಲ್ಲಿ ಜನನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನವನ್ನು ಅಭಿಮಾನಿಗಳು, ಬೆಂಬಲಿಗರು ವಿಶೇಷವಾಗಿ ಹಮ್ಮಿಕೊಂಡಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಂಜನೇಯ ಅವರು, ಸಿದ್ದರಾಮಯ್ಯ ಅವರ ಜನ್ಮದಿನ ಆಚರಣೆ ಬಿಜೆಪಿಗರಲ್ಲಿ ನಡುಕು ಉಂಟು ಮಾಡಿದೆ. ಇದೇ ಕಾರಣಕ್ಕೆ ಸಿದ್ದರಾಮಯ್ಯ ಹೆಸರು ಕೇಳಿದರೆ ನಿದ್ದೆಗೆಟ್ಟು ಬೆಚ್ಚಿ ಬೀಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಜನಧನ್ ಅಕೌಂಟ್, ಉಜ್ವಲ ಯೋಜನೆ ಮೂಲಕ ಬಡಜನರ ಬದುಕನ್ನು ಉತ್ತಮದತ್ತ ಕೊಂಡೊಯ್ಯೊತ್ತೇವೆ ಎಂದು ಹೇಳಿ, ಈಗ ಜನರನ್ನು ಸಂಕಷ್ಟ ಸಿಲುಕಿಸಲಾಗಿದೆ. ಸಿಲಿಂಡರ್ ಬೆಲೆ ಏರಿಕೆ ಆಗಿ ಜನ ಕಟ್ಟಿಗೆ ಒಲೆ ಕಡೆ ಹೋಗುತ್ತಿದ್ದಾರೆ. ಬೇಳೆಕಾಳು, ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಪ್ರತಿವರ್ಷಕ್ಕೆ ಎರಡು ಕೋಟಿ ಉದ್ಯೋಗದ ಆಸೆ ತೋರಿಸಿದ್ದ ಬಿಜೆಪಿ, ಪ್ರತಿವರ್ಷ ಸರ್ಕಾರಿ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿ ಉದ್ಯೋಗ ಕಡಿತ ಮಾಡುತ್ತಿದೆ. ಅಚ್ಚೇದಿನ್ ಅಂದರೇ ಇದೆನಾ ಎಂದು ಜನರು ಬಿಜೆಪಿ, ಮೋದಿ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಜನ ಸ್ಮರಿಸುತ್ತಿದ್ದಾರೆ ಎಂದರು.

ಬಡವರ ವಿರೋಧಿ, ಶ್ರೀಮಂತರ ಪರ ಸರ್ಕಾರ ಆಗಿರುವ ಬಿಜೆಪಿಗೆ ಪಾಠ ಕಲಿಸಲು ಜನ ಕಾಯುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ತರಲು ಜನ ಉತ್ಸಾಹಕರಾಗಿದ್ದಾರೆ. ಜನರ ನಾಡಿಮಿಡಿತವನ್ನು ಆಂತರಿಕ ಸರ್ವೇ ಮೂಲಕ ಅರಿತು ಹಾಗೂ ಈ ಮಧ್ಯೆ ಸಿದ್ದರಾಮಯ್ಯ ಜನ್ಮದಿನಕ್ಕೆ ಲಕ್ಷಾಂತರ ಜನ ಸೇರುವುದರಿಂದ ಬಿಜೆಪಿ ನಾಯಕರು ಆತಂಕಕ್ಕೆ ಒಳಗಾಗಿದ್ದಾರೆ ಎಂದರು.

ಐಟಿ, ಇಡಿ, ಸಿಬಿಐ ಮೂಲಕ ಪ್ರತಿಪಕ್ಷವನ್ನು ಬೆದರಿಸಲು ಯತ್ನಿಸುತ್ತಿರುವ ಬಿಜೆಪಿ ಸರ್ಕಾರ, ಸಿದ್ದರಾಮಯ್ಯ ವಿರುದ್ಧ ಏನು ಮಾಡಲಾಗದೆ ಮೈ ಪರಚಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ನಡೆದರು, ಕುಂತ್ರು, ನಿಂತ್ರು, ಮಾತನಾಡಿದರೂ ಸುಮ್ಮನಿದ್ದರು ಟೀಕೆ ಮಾಡುವ ಕೆಟ್ಟ ಹವ್ಯಾಸ ಬೆಳೆಸಿಕೊಂಡಿರುವ ಬಿಜೆಪಿಗರು, ಈಗ ಅಭಿಮಾನಿಗಳು ಮಧ್ಯಕರ್ನಾಟಕ ದಾವಣಗೆರೆಯಲ್ಲಿ ಆಯೋಜಿಸಿರುವ ಸಿದ್ದರಾಮಯ್ಯ ಜನ್ಮದಿನ ಸಂಭ್ರಮದ ಮೇಲೆ ಹೊಟ್ಟೆ ಕಿಚ್ಚು ಪಡುತ್ತಿದ್ದಾರೆ ಎಂದು ಹೇಳಿದರು.

ಈ ಹಿಂದೆ ಅನೇಕ ನಾಯಕರು 50, 60, 75 ಹೀಗೆ ವಿಶೇಷ ಸಂದರ್ಭ ಜನ್ಮದಿನವನ್ನು ಸಾರ್ವಜನಿಕವಾಗಿ ಆಚರಿಸಿಕೊಂಡಿದ್ದಾರೆ. ಈಗಲೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಬಿ.ಎಸ್.ಯಡಿಯೂರಪ್ಪ, ಎಸ್.ಎಂ.ಕೃಷ್ಣ ಸೇರಿ ಅನೇಕ ಮುತ್ಸದ್ಧಿಗಳ ಜನ್ಮದಿನಕ್ಕೆ ನಾವೆಲ್ಲರೂ ಪಕ್ಷಾತೀತವಾಗಿ ಶುಭ ಕೋರುತ್ತೇವೆ.
ಆದರೆ, ಬಿಜೆಪಿಗರು ಸಿದ್ದರಾಮಯ್ಯ ಜನ್ಮದಿನದ ಆಚರಣೆಗೆ ಮಾತ್ರ ಟೀಕಿಸುತ್ತಿರುವುದು ಅವರ ಸಣ್ಣ, ಕೆಟ್ಟ ಮನಸ್ಥಿತಿ ಹಾಗೂ ಭೀತಿಗೆ ಒಳಗಾಗಿರುವುದಕ್ಕೆ ಕನ್ನಡಿ ಆಗಿದೆ ಎಂದು ಬೇಸರಿಸಿದರು.

 

 

ಸಿದ್ದರಾಮಯ್ಯ ಅವರ ಜನ್ಮದಿನವನ್ನು ಅಮೃತೋತ್ಸವ ಎಂದು ನಾವು ಕಾರ್ಯಕ್ರಮ ಆಯೋಜಿಸಿದ್ದೇವೆ.  ಅಭಿಮಾನಿಗಳು ರಾಜ್ಯದಾದ್ಯಂತ ಕಟೌಟ್, ವಾಹನದ ಮೇಲೆ ಫ್ಲೆಕ್ಸ್ ಗಳು ಹಾಕಿಕೊಂಡು ಸಂಭ್ರಮಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರ ಮೇಲೆ ಇರುವ ಜನರ ಪ್ರೀತಿ ಬಣ್ಣಿಸಲಾಗದಷ್ಟು ಅಗಾಧವಾಗಿದೆ ಎಂದರು.

ಗಣಿನಾಡು ಬಳ್ಳಾರಿಗೆ ಪಾದಯಾತ್ರೆ ಮೂಲಕ ಸಿದ್ದರಾಮಯ್ಯ ಬಿಜೆಪಿಯ ಆಡಳಿತವನ್ನು ಕಿತ್ತು ಹಾಕಿದ್ದರು. ಈಗ ಶಿಕ್ಷಣ ಕಾಶಿ, ದಾನಧರ್ಮ, ಹೋರಾಟದ ನೆಲ ಎಂದೇ ಖ್ಯಾತಿ ಗಳಿಸಿರುವ ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ ಜನ್ಮದಿನ ಆಚರಣೆಯು ಕೆಟ್ಟು ನಿಂತಿರುವ ಡಬಲ್ ಇಂಜಿನ್ ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರವನ್ನು ಕಿತ್ತು ಹಾಕಲು ಮುನ್ನುಡಿ ಬರೆಯಲಿದೆ.ಈ ಕಾರಣಕ್ಕೆ ಸಿದ್ದರಾಮಯ್ಯ ಜನ್ಮದಿನದ ಅಮೃತ ಮಹೋತ್ಸವ ಕುರಿತು ಬಿಜೆಪಿ ನಾಯಕರು ಭಯಭೀತಿಗೆ ಒಳಗಾಗಿ ಅಧಾರರಹಿತ ಟೀಕೆ ಮಾಡುತ್ತಿದ್ದಾರೆ ಎಂದರು.

 

ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಕಡು ಟೀಕೆ ಮಾಡುತ್ತಲೇ ಅವರ 75ನೇ ವರ್ಷದ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಯಡಿಯೂರಪ್ಪ ಅವರಿಗೆ ಆಯಸ್ಸು, ಆರೋಗ್ಯ, ನೆಮ್ಮದಿ ನೀಡಲಿ ಎಂದು ಹಾರೈಸಿದ ಹೃದಯವಂತ  ಸಿದ್ದರಾಮಯ್ಯ. ಈ ಪ್ರೀತಿಯನ್ನು ಯಡಿಯೂರಪ್ಪ ಕೂಡ ಹೊಂದಿದ್ದು, ಇದೇ ಕಾರಣಕ್ಕೆ ಸಿದ್ದರಾಮಯ್ಯ ಜನ್ಮದಿನ ಕಾರ್ಯಕ್ರಮವನ್ನು ಟೀಕಿಸದಂತೆ ಪಕ್ಷದ ನಾಯಕರಿಗೆ ಸೂಚನೆ ನೀಡಿರುವುದು ಹಾಗೂ ನಾಡಿನ ಮುತ್ಸದ್ಧಿ ಸಿದ್ದರಾಮಯ್ಯ ಅವರ ಜನ್ಮದಿನಕ್ಕೆ ಶುಭಾಶಯ ಕೋರಿರುವ ಯಡಿಯೂರಪ್ಪ ಅವರ ದೊಡ್ಡತನ ಮೆಚ್ಚುವಂತಹದ್ದಾಗಿದೆ . ಬಿಜೆಪಿ ಇತರೆ ನಾಯಕರು ಇದನ್ನು ಪಾಲಿಸುವ ಗುಣ ಬೆಳೆಸಿಕೊಳ್ಳಲಿ ಎಂದು ಕಿವಿಮಾತು ಹೇಳಿದರು.

ರಾಜಕೀಯ, ಸೈದ್ಧಾಂತಿಕ ಭಿನ್ನಾಭಿಪ್ರಾಯದ ಮಧ್ಯೆಯೂ ಮನುಷ್ಯತ್ವ ನಮ್ಮಲ್ಲಿ ಇರಬೇಕು. ಆಗ ಮಾತ್ರ ಮತ್ತೊಬ್ಬರ ಸಂಭ್ರಮವನ್ನು ಗೌರವಿಸುವ ಮನಸ್ಥಿತಿ ಬರಲಿದೆ. ಆದರೆ, ಬಿಜೆಪಿಗರು ಮನುಷ್ಯತ್ವವನ್ನೇ ಕಳೆದುಕೊಂಡು ನೀಚತನದ  ಪ್ರದರ್ಶನತನಕ್ಕೆ ಇಳಿದಿದ್ದಾರೆ ಎಂದು ಬೇಸರಿಸಿದರು.

ಸಿದ್ದರಾಮಯ್ಯ ಕೇವಲ ಒಂದು ಜಾತಿ, ಧರ್ಮ, ವರ್ಗಕ್ಕೆ ಸೀಮಿತ ನಾಯಕರು ಅಲ್ಲ. ಎಲ್ಲ ಸಮುದಾಯದ ಜನರ ಪ್ರೀತಿ ಗಳಿಸಿರುವ ವ್ಯಕ್ತಿ.‌ ತಮ್ಮ ಅಧಿಕಾರಾವಧಿಯಲ್ಲಿ ಎಲ್ಲ ವರ್ಗದ ಪ್ರಗತಿಗೆ ಶ್ರಮಿಸಿದ್ದಾರೆ. ಇಂತಹ ಅಪರೂಪದ ನಾಯಕನ 75ನೇ ವರ್ಷದ ಜನ್ಮದಿನ ನಾಡಿನ ಮಟ್ಟಿಗೆ ಹಬ್ಬ ಎಂದು ಬಣ್ಣಿಸಿದರು.

ಮೊದಲಿನಿಂದಲೂ ಕುಟುಂಬ, ಧರ್ಮ, ಜಾತಿಗಳ ಮಧ್ಯೆ ಬೆಂಕಿ ಹಚ್ಚಿ ಚಳಿ ಕಾಯಿಸಿಕೊಂಡು ಅಭ್ಯಾಸ ಇರುವ ಬಿಜೆಪಿ, ಈಗ ಸಿದ್ದರಾಮಯ್ಯ ಜನ್ಮದಿನ ಆಚರಣೆ ಕಾರ್ಯಕ್ರಮಕ್ಕೆ 15 ಲಕ್ಷಕ್ಕೂ ಹೆಚ್ಚು ಜನ ಸೇರಲಿದ್ದಾರೆ ಎಂಬ ಅವರದ್ದೇ ಸರ್ಕಾರದ ಪೊಲೀಸ್ ಗುಪ್ತದಳ ಮಾಹಿತಿ ನೀಡಿರುವುದು, ಅವರನ್ನು ಬೆಚ್ಚುಬಿಳಿಸಿದೆ ಎಂದರು.

ಕೆಎಸ್.ಆರ್.ಟಿಸಿ ನಿಗಮ ನಷ್ಟದಲ್ಲಿ ಇದೆ. ಆದ್ದರಿಂದ ಸಿದ್ದರಾಮಯ್ಯ ಜನ್ಮದಿನದ ಸೇರಿದಂತೆ ವಿಶೇಷ ಕಾರ್ಯಕ್ರಮಗಳಿಗೆ ಹೆಚ್ಚುವರಿ ಬಸ್ ಗಳನ್ನು ಬಿಡಬೇಕು. ಕೂಡಲೇ ಸಿದ್ದರಾಮಯ್ಯ ಜನ್ಮದಿನ ಕಾರ್ಯಕ್ರಮಕ್ಕೆ ವಿಶೇಷ ಬಸ್ ಗಳನ್ನು ರಾಜ್ಯದ ವಿವಿಧ ಸ್ಥಳಗಳಿಂದ ಬಿಟ್ಟರೆ ಸಾರಿಗೆ ನಿಗಮಕ್ಕೆ ಲಾಭ ಆಗಲಿದೆ. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪಕ್ಷ ಬಲವರ್ಧನೆ ಜನ್ಮದಿನ ಆನೆಬಲ
ಸಿದ್ದರಾಮಯ್ಯ ಜನ್ಮದಿನ ಕಾರ್ಯಕ್ರಮ ಪಕ್ಷದ ಬಲವರ್ಧನೆಗೆ ಹೆಚ್ಚು ಸಹಕಾರಿಯಾಗಲಿದೆ. ಜೊತೆಗೆ ಭವಿಷ್ಯದ ಪ್ರಧಾನಮಂತ್ರಿ ಎಂದೇ ಜನರಿಂದ ಪ್ರೀತಿಯಿಂದ ಕರೆಸಿಕೊಳ್ಳುತ್ತಿರುವ, ದೂರದೃಷ್ಠಿ ಯುವ ನಾಯಕ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಜನ್ಮದಿನಕ್ಕೆ ಶುಭಾಶಯ ಕೋರಲು ದೆಹಲಿಯಿಂದ ಆಗಮಿಸುತ್ತಿರುವುದು ಕಾರ್ಯಕ್ರಮಕ್ಕೆ ಆನೆಬಲ ತರುತ್ತಿದೆ. ಜೊತೆಗೆ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳಲ್ಲಿ ಹೆಚ್ಚು ಉತ್ಸಾಹ ಉಂಟು ಮಾಡಿದೆ. ಈ ಕಾರ್ಯಕ್ರಮ ಪಕ್ಷದಲ್ಲಿ ಒಗ್ಗಟ್ಟು ಪ್ರದರ್ಶನ ಹಾಗೂ ಪಕ್ಷದ ಕಾರ್ಯಕರ್ತರ ಶಕ್ತಿಪ್ರದರ್ಶನಕ್ಕೆ ವೇದಿಕೆಯಾಗಿ ಮಾರ್ಪಟ್ಟಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ ಪೀರ್, ಉಪಾಧ್ಯಕ್ಷ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಸಂಪತ್ ಕುಮಾರ್, ಕಿರಣ್, ಹೊಳಲ್ಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಟಿ.ಹನುಮಂತಪ್ಪ, ಜಿ.ಪಂ ಮಾಜಿ ಸದಸ್ಯ ಲೋಹಿತ್ ಕುಮಾರ್ , ಮುಖಂಡರಾದ ಸುನೀಲ್ ನಾಯ್ಕ್, ಪ್ರಕಾಶ್, ಮುದಾಫೀರ್ ನವಾಜ್ ಇದ್ದರು.

ಸುದ್ದಿ ಜಾಗೀರಾತಿಗೆ ಸಂಪರ್ಕಿಸಿ: 8660924503

Share. Facebook Twitter Pinterest LinkedIn Tumblr WhatsApp Email
Previous Articleಫಾಜಿಲ್ ಹತ್ಯೆ 14 ಶಂಕಿತರು ಪೋಲಿಸ್ ವಶಕ್ಕೆ
Next Article ಪ್ರವೀಣ್ ಹತ್ಯೆ ಪ್ರಕರಣ : ಎನ್ ಐ ಎ ಗೆ ವಹಿಸಲಾಗುತ್ತದೆ
D Kumaraswamy
  • Tumblr

Related Posts

ಜಾತಿಪ್ರಮಾಣ ಪತ್ರ ವಿತರಣೆಗೆ ಇದ್ದ ಅಡ್ಡಿ ಆತಂಕ ದೂರ; ತಂತ್ರಾಂಶ ಕಾರ್ಯಾರಂಭ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

November 12, 2025

ಪ್ರಧಾನಿ ಮೋದಿಯವರದ್ದು ಕಳಂಕರಹಿತ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

June 12, 2025

ಬಿಜೆಪಿಯಲ್ಲಿ ಚಿತ್ರದುರ್ಗ ಲೋಕಸಭೆಗೆ ಅಚ್ಚರಿ ಅಭ್ಯರ್ಥಿ ಯಾರು?

March 21, 2024

ಎಲ್ಲೆಲ್ಲೂ ಸ್ಥಳೀಯ ಅಭ್ಯರ್ಥಿ ಕೂಗು : ಡಾ.ಬಿ .ತಿಪ್ಪೇಸ್ವಾಮಿ ಫುಲ್ ರೌಂಡ್ಸ್

February 24, 2024
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.