ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೋನಾ ಸೋಂಕು ದೃಢ : ಕೊನೆ ಕ್ಷಣದಲ್ಲಿ ದೆಹಲಿ ಪ್ರವಾಸ ರದ್ದು
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋರೋನಾ ಸೋಂಕು ತಗುಲಿದ್ದು, ದೆಹಲಿಯ ಪ್ರವಾಸವನ್ನು ರದ್ದು ಮಾಡಿದ್ದಾರೆ. ಅವರು ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದು, ನನಗೆ ಕೋವಿಡ್ 19 ಸೋಂಕು ತಗುಲಿದ್ದು ನಾನು ಆರೋಗ್ಯವಾಗಿದ್ದೇನೆ, ನನ್ನ ಸಂಪರ್ಕದಲ್ಲಿರುವವರು ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು, ನನ್ನ ದೆಹಲಿ ಪ್ರವಾಸ ರದ್ದಾಗಿದೆ ಎಂದು ತಿಳಿಸಿದ್ದಾರೆ.