ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ವಿರುದ್ದ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ.

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಚುನಾವಣಾ ಆಯೋಗಕ್ಕೆ ನೀಡಿದ್ದು ದೂರಿನಲ್ಲಿ ಮತದಾರ ಶಾಸಕರಿಗೆ ಪಂಚತಾರಾ ಹೋಟೆಲ್ನಲ್ಲಿ ಐಷಾರಾಮಿ ವಸತಿ ಕಲ್ಪಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಎನ್ಡಿಎ ಅಭ್ಯರ್ಥಿ (ಮುರ್ಮು), ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ, ವಿಧಾನಸಭೆಯ ಬಿಜೆಪಿ ಮುಖ್ಯ ಸಚೇತಕ ಸತೀಶ್ ರೆಡ್ಡಿ, ಸಚಿವರು ಮತ್ತು ಇತರರ ವಿರುದ್ಧ ದೂರು ದಾಖಲಾಗಿದೆ.
ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸುವ ಕುರಿತು ಶಾಸಕರಿಗೆ ತರಬೇತಿ ನೀಡುವ ನೆಪದಲ್ಲಿ ಬಿಜೆಪಿಯ ಇತರ ಹಿರಿಯ ನಾಯಕರು ಒಟ್ಟುಗೂಡಿ ಎಲ್ಲಾ ಬಿಜೆಪಿ ಶಾಸಕರನ್ನು ಇಲ್ಲಿನ ಪಂಚತಾರಾ ಹೋಟೆಲ್ಗೆ ಆಹ್ವಾನಿಸಿ ಅವರಿಗೆ ಐಷಾರಾಮಿ ಕೊಠಡಿ, ಊಟ, ಮದ್ಯ, ಪಾನೀಯ ಮತ್ತು ಮನರಂಜನೆಯನ್ನು ಒದಗಿಸಿದ್ದಾರೆ. ‘ಬಿಜೆಪಿ ಮುಖಂಡರ ಶಾಸಕರಿಗೆ ಇಷ್ಟೆಲ್ಲ ಸೌಲಭ್ಯಗಳನ್ನು ನೀಡುವ ಮೂಲಕ ದ್ರೌಪದಿ ಮುರ್ಮು ಪರವಾಗಿ ಮತ ಹಾಕುವಂತೆ ಅನಗತ್ಯ ಪ್ರಭಾವ ಬೀರಿದ್ದು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ’ ಎಂದು ಕಾಂಗ್ರೆಸ್ ಮುಖಂಡರು ದೂರಿನಲ್ಲಿ ತಿಳಿಸಿದ್ದಾರೆ.
ಸುದ್ದಿಗಾಗಿ ಇಲ್ಲಿಗೆ ಸಂಪರ್ಕಿಸಿ: 8660924503





