ನರೇಗಾ ಕಾಮಗಾರಿ ಬಗ್ಗೆ ಕೂಲಿ ಕಾರ್ಮಿಕರಿಂದ ಮಾಹಿತಿ ಪಡೆದ ಸಿಇಓ ದಿವಾಕರ್

ಜಿಲ್ಲಾ ಸುದ್ದಿ

ಮಹಾತ್ಮ ಗಾಂಧಿ ನರೇಗಾ ಯೋಜನೆಯ ಚಾಲನೆಯಲ್ಲಿರುವ ಕಾಮಗಾರಿಯ ವೀಕ್ಷಣೆ ಮಾಡಿದ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನರೇಗಾ ಕೂಲಿ ಕಾರ್ಮಿಕರ ಜೊತೆ ಮಾತನಾಡಿ,ಅವರಿಂದಲೇ ಯೋಜನೆ ಬಗ್ಗೆ ಮಾಹಿತಿ ಪಡೆದುಕೊಂಡರು.

 

 

 

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು, ಹಾನಗಲ್ ಗ್ರಾಮ ಪಂಚಾಯತಿ ವ್ಯಾಪಿಯ ಕೊಮ್ಮನಪಟ್ಟಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಅನುಷ್ಠಾನಿಸುತ್ತಿರುವ ಹಾಗೂ ಚಾಲನೆಯಲ್ಲಿರುವ ಗೋಕಟ್ಟೆ ಹೂಳು ತೆಗೆಯು್ವ ಕಾಮಗಾರಿ ಸ್ಥಳಕ್ಕೆ ಭೇಟಿಯನ್ನು‌ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿವಾಕರ್ ನೀಡಿದರು, ವೀಕ್ಷಣೆ ಮಾಡಿ, ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕೂಲಿಕಾರರ ಜೊತೆ ನರೇಗಾ ಯೋಜನೆ ಬಗ್ಗೆ ಮಾಹಿತಿ ಕೇಳಿದರು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಐ ಇ ಸಿ ಸಂಯೋಜಕರು,ಪಿ ಡಿ ಒ/ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಇದ್ದರು.

Leave a Reply

Your email address will not be published. Required fields are marked *